ಇನ್ನೂ ಎರಡು ವಾರ ನಟ ದರ್ಶನ್ಗೆ ಜೈಲೇ ಗತಿ

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹಾಗೂ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ನ ತೀರ್ಪು ತೀವ್ರ ಕುತೂಹಲ ಕೆರಳಿಸಿತ್ತು. ದರ್ಶನ್ ಇನ್ನೂ ಎರಡು ವಾರ ಪರಪ್ಪನ ಅಗ್ರಹಾರದ ಜೈಲಿನಲ್ಲೇ ಉಳಿಯಬೇಕಾಗುತ್ತದೆ.
ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ತಮಗೆ ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಗಡುವನ್ನು ನೀಡಿದೆ.
ಸಾಂದರ್ಭಿಕ ಸಾಕ್ಷ್ಯಾಧಾರಗಳೆಲ್ಲವೂ ನಟ ದರ್ಶನ್ ವಿರುದ್ಧವೇ ಇರುವ ಹಿನ್ನೆಲೆಯಲ್ಲಿ ದರ್ಶನ್ಗೆ ಜಾಮೀನು ಸಿಗುವ ಸಾಧ್ಯತೆಗಳು ಬಹಳಷ್ಟು ಕಡಿಮೆ ಇವೆ ಎಂಬ ಅನುಮಾನವನ್ನು ಕಾನೂನು ತಜ್ಞರು ವ್ಯಕ್ತಪಡಿಸಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)
More from Filmibeat
English summary
The hearing on the bail petition of Kannada actor Darshan put off the Karnataka High court and postponed the hearing to two weeks. Earlier the City Civil and Sessions Court rejected the bail petition of the actor.
ದರ್ಶನ್ ಜಾಮೀನು ಹೈಕೋರ್ಟ್ ನಿಖಿತಾ ಅಪರಾಧ ಬೆಂಗಳೂರು high court ಚಾಲೆಂಜಿಂಗ್ ಸ್ಟಾರ್ darshan nikhita crime challenging star bangalore


Click it and Unblock the Notifications











