Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಖ್ಯಮಂತ್ರಿ ಜಯಲಲಿತಾ ಪಾತ್ರದಲ್ಲಿ ಜಯಚಿತ್ರಾ
ಡಾ.ರಾಜ್ ಅಪಹರಣ, 108 ದಿನಗಳ ಒತ್ತೆ, ಬಿಡುಗಡೆ, ಆನಂತರದ ಬೆಳವಣಿಗೆಗಳು ಹಾಗೂ ವೀರಪ್ಪನ್ ಕೇಂದ್ರಬಿಂದುವಾಗಿ ಎಎಂಆರ್ ರಮೇಶ್ ಕೈಗೆತ್ತಿಕೊಂಡಿರುವ ಚಿತ್ರ 'ಅಟ್ಟಹಾಸ'. ಈ ಚಿತ್ರದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಪಾತ್ರವನ್ನು ಖ್ಯಾತ ಅಭಿನೇತ್ರಿ ಜಯಚಿತ್ರಾ ಅವರು ಪೋಷಿಸಲಿದ್ದಾರೆ.
'ಅಟ್ಟಹಾಸ' ಚಿತ್ರದಲ್ಲಿ ನಟಿಸಲು ಜಯಚಿತ್ರಾ ಅವರು ಈಗಾಗಲೆ ಒಪ್ಪಿಗೆ ನೀಡಿರುವುದಾಗಿ ಎಎಂಆರ್ ರಮೇಶ್ ಖಚಿತಪಡಿಸಿದ್ದಾರೆ. ಜಯಚಿತ್ರಾ ಅವರಿಗೂ ಜಯಲಲಿತಾ ಅವರಿಗೂ ನೋಡಲು ಸಾಮ್ಯತೆ ಇದ್ದು ಇಬ್ಬರೂ ಅಕ್ಕತಂಗಿಯರಂತೆ ಕಾಣುತ್ತಾರೆ. ಹುಲಿಯ ಹಾಲಿನ ಮೇವು, ಮನೆ ಮನೆ ಕತೆ ಚಿತ್ರಗಳಲ್ಲಿ ಜಯಚಿತ್ರಾ ಅಭಿನಯಿಸಿದ್ದಾರೆ.
ಚಿತ್ರದಲ್ಲಿ ವೀರಪ್ಪನ್ ಆಗಿ ಕಿಶೋರ್ ಕಾಣಿಸಲಿದ್ದು, ಅಣ್ಣಾವ್ರ ಪಾತ್ರವನ್ನು ಸುರೇಶ್ ಒಬೆರಾಯ್ ಪೋಷಿಸಲಿದ್ದಾರೆ. ಇದೊಂದು ದ್ವಿಭಾಷಾ ಚಿತ್ರವಾಗಿದ್ದು ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಿಸಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ 'ವನ ಯುದ್ಧಂ' ಎಂದು ಹೆಸರಿಡಲಾಗಿದೆ. ಎಸ್ಟಿಎಫ್ ಮುಖ್ಯಸ್ಥ ವಿಜಯ್ ಕುಮಾರ್ ಪಾತ್ರದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪಾತ್ರ ಪೋಷಣೆ ಮಾಡಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)