Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಲೋ ಈಗಲೋ ಎತ್ತಂಗಡಿಯಾಗಲಿದೆ 'ವಿಷ್ಣು'
ಇದು ಲೇಟೆಸ್ಟ್ ಗಾಂಧಿನಗರದ ಬಾಕ್ಸಾಫೀಸ್ ರಿಪೋರ್ಟ್. ಇನ್ನು ಬಿಡುಗಡೆಯಾಗಿ ಒಂದು ವಾರವೂ ಕಳೆದಿಲ್ಲ ಆಗಲೆ ಬಣಬಣ ಎನ್ನುತ್ತಿದೆ 'ವಿಷ್ಣು' ಚಿತ್ರ. ಪ್ರೇಕ್ಷಕರಿಲ್ಲದೆ ಚಿತ್ರ ಇನ್ನೇನು ಆಗಲೋ ಈಗಲೋ ಎತ್ತಂಗಡಿಯಾಗುವ ಹಂತ ತಲುಪಿದೆ. ಸಾಧ್ಯವಾದರೆ ಒಮ್ಮೆ ನೋಡಿ 'ಅನುಭವಿಸಿ' ಎನ್ನುತ್ತವೆ ಮೂಲಗಳು.
ಚಿತ್ರದ ಹೆಸರು ನೋಡಿ ಚಿತ್ರಮಂದಿರಕ್ಕೆ ಹೋದ ಪ್ರೇಕ್ಷಕರ ಪಾಡು ಇಂಗುತಿಂದ ಮಂಗನಂತಾಗಿತ್ತು ಎಂಬುದು ಕೆಲವರ ಅಭಿಪ್ರಾಯ. ಪ್ರೇಕ್ಷಕರು ಕೊನೆಯ ತನಕ ಚಾತಕ ಪಕ್ಷಿಯಂತೆ ಎದುರು ನೋಡಿದರೂ ಚಿತ್ರದಲ್ಲಿ ಎಲ್ಲೂ ಸಾಹಸ ಸಿಂಹ ವಿಷ್ಣುವರ್ಧನ ಕಾಣಸಿಗಲ್ಲ.
ಈ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನರಿಗೆ ಸಂಬಂಧಿಸಿದ ಒಂದೇ ಒಂದು ಎಳೆಯೂ ಇಲ್ಲ. ಹೋಗಲಿ ಚಿತ್ರದಲ್ಲಿ ಮನಸ್ಸಿಗೆ ಮುದನೀಡುವ ಸನ್ನಿವೇಶಗಳು ಇವೆಯೇ ಎಂದರೆ, ಅದೂ ಇಲ್ಲ. ಒಂದು ವೇಳೆ ಈ ಚಿತ್ರವನ್ನು ಸಾಹಸಸಿಂಹ ವಿಷ್ಣುವರ್ಧನ್ ಕಣ್ಮರೆಯಾದಾಗ ಬಿಡುಗಡೆ ಮಾಡಿದ್ದಿದ್ದರೆ ಅದರ ಕತೆಯೇ ಬೇರೆ ಇರುತ್ತಿತ್ತು. ಕನಿಷ್ಠ ನಾಲ್ಕು ವಾರಗಳ ಕಾಲವಾದರೂ ಓಡುತ್ತಿತ್ತು ಎಂಬ ಮಾತುಗಳು ಕೇಳಿಬಂದಿವೆ. ಅಭಿಜಿತ್ ಪೋಷಿಸಿರುವ ವಿಷ್ಣು ಪಾತ್ರ ಪೇಲವವಾಗಿದೆ.
ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿರುವ ಅಭಿಜಿತ್ ಅವರದು ಚಿತ್ರದಲ್ಲಿ ದ್ವಿಪಾತ್ರಾಭಿನಯ. ಪೂನಂ, ಕ್ಯಾಥರಿನ್, ಸತ್ಯಪ್ರಕಾಶ್, ಗೀತಾ, ಶರತ್ ಲೋಹಿತಾಶ್ವ, ಆಶಿಷ್ ವಿದ್ಯಾರ್ಥಿ, ಬುಲೆಟ್ ಪ್ರಕಾಶ್, ರವಿಶಂಕರ್ರಂತಹ ಅದ್ಭುತ ನಟರಿದ್ದರೂ ಪ್ರೇಕ್ಷಕರನ್ನು ಸೆಳೆಯುವ ಅಂಶಗಳು ಇಲ್ಲದೆ ಚಿತ್ರ ಎತ್ತಂಗಡಿಯಾಗುವ ಹಂತ ತಲುಪಿದೆ. (ಒನ್ಇಂಡಿಯಾ ಕನ್ನಡ)