Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಲೋ ಈಗಲೋ ಎತ್ತಂಗಡಿಯಾಗಲಿದೆ 'ವಿಷ್ಣು'
ಇದು ಲೇಟೆಸ್ಟ್ ಗಾಂಧಿನಗರದ ಬಾಕ್ಸಾಫೀಸ್ ರಿಪೋರ್ಟ್. ಇನ್ನು ಬಿಡುಗಡೆಯಾಗಿ ಒಂದು ವಾರವೂ ಕಳೆದಿಲ್ಲ ಆಗಲೆ ಬಣಬಣ ಎನ್ನುತ್ತಿದೆ 'ವಿಷ್ಣು' ಚಿತ್ರ. ಪ್ರೇಕ್ಷಕರಿಲ್ಲದೆ ಚಿತ್ರ ಇನ್ನೇನು ಆಗಲೋ ಈಗಲೋ ಎತ್ತಂಗಡಿಯಾಗುವ ಹಂತ ತಲುಪಿದೆ. ಸಾಧ್ಯವಾದರೆ ಒಮ್ಮೆ ನೋಡಿ 'ಅನುಭವಿಸಿ' ಎನ್ನುತ್ತವೆ ಮೂಲಗಳು.
ಚಿತ್ರದ ಹೆಸರು ನೋಡಿ ಚಿತ್ರಮಂದಿರಕ್ಕೆ ಹೋದ ಪ್ರೇಕ್ಷಕರ ಪಾಡು ಇಂಗುತಿಂದ ಮಂಗನಂತಾಗಿತ್ತು ಎಂಬುದು ಕೆಲವರ ಅಭಿಪ್ರಾಯ. ಪ್ರೇಕ್ಷಕರು ಕೊನೆಯ ತನಕ ಚಾತಕ ಪಕ್ಷಿಯಂತೆ ಎದುರು ನೋಡಿದರೂ ಚಿತ್ರದಲ್ಲಿ ಎಲ್ಲೂ ಸಾಹಸ ಸಿಂಹ ವಿಷ್ಣುವರ್ಧನ ಕಾಣಸಿಗಲ್ಲ.
ಈ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನರಿಗೆ ಸಂಬಂಧಿಸಿದ ಒಂದೇ ಒಂದು ಎಳೆಯೂ ಇಲ್ಲ. ಹೋಗಲಿ ಚಿತ್ರದಲ್ಲಿ ಮನಸ್ಸಿಗೆ ಮುದನೀಡುವ ಸನ್ನಿವೇಶಗಳು ಇವೆಯೇ ಎಂದರೆ, ಅದೂ ಇಲ್ಲ. ಒಂದು ವೇಳೆ ಈ ಚಿತ್ರವನ್ನು ಸಾಹಸಸಿಂಹ ವಿಷ್ಣುವರ್ಧನ್ ಕಣ್ಮರೆಯಾದಾಗ ಬಿಡುಗಡೆ ಮಾಡಿದ್ದಿದ್ದರೆ ಅದರ ಕತೆಯೇ ಬೇರೆ ಇರುತ್ತಿತ್ತು. ಕನಿಷ್ಠ ನಾಲ್ಕು ವಾರಗಳ ಕಾಲವಾದರೂ ಓಡುತ್ತಿತ್ತು ಎಂಬ ಮಾತುಗಳು ಕೇಳಿಬಂದಿವೆ. ಅಭಿಜಿತ್ ಪೋಷಿಸಿರುವ ವಿಷ್ಣು ಪಾತ್ರ ಪೇಲವವಾಗಿದೆ.
ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿರುವ ಅಭಿಜಿತ್ ಅವರದು ಚಿತ್ರದಲ್ಲಿ ದ್ವಿಪಾತ್ರಾಭಿನಯ. ಪೂನಂ, ಕ್ಯಾಥರಿನ್, ಸತ್ಯಪ್ರಕಾಶ್, ಗೀತಾ, ಶರತ್ ಲೋಹಿತಾಶ್ವ, ಆಶಿಷ್ ವಿದ್ಯಾರ್ಥಿ, ಬುಲೆಟ್ ಪ್ರಕಾಶ್, ರವಿಶಂಕರ್ರಂತಹ ಅದ್ಭುತ ನಟರಿದ್ದರೂ ಪ್ರೇಕ್ಷಕರನ್ನು ಸೆಳೆಯುವ ಅಂಶಗಳು ಇಲ್ಲದೆ ಚಿತ್ರ ಎತ್ತಂಗಡಿಯಾಗುವ ಹಂತ ತಲುಪಿದೆ. (ಒನ್ಇಂಡಿಯಾ ಕನ್ನಡ)