Don't Miss!
- Automobiles Citroen Basalt Vision: ಸಿಟ್ರನ್ ಹೊಸ ಕಾಂಪ್ಯಾಕ್ಟ್ ಎಸ್ಯುವಿ ಅನಾವರಣ... ಬಿಡುಗಡೆಗೆ ಸಜ್ಜು!
- News Dharwad: ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆ ಸ್ಪರ್ಧೆ ಏ.2ರಂದು ತೀರ್ಮಾನ
- Sports Rohit Sharma: ಆರ್ಸಿಬಿಗೆ ಬನ್ನಿ ರಾಜನಂತೆ ನೋಡ್ಕೊಂತೀವಿ- ರೋಹಿತ್ ಶರ್ಮಾಗೆ ಸ್ವಾಗತ ಕೋರಿದ ಬೆಂಗಳೂರು ಫ್ಯಾನ್ಸ್
- Finance ಹಣದ ಕಂತೆಯನ್ನೇ ಹಾಸಿಗೆ ಮಾಡಿ ಮಲಗಿದ ರಾಜಕಾರಣಿ ಫೋಟೋ ವೈರಲ್!
- Lifestyle ಬೆಳಗ್ಗೆ ಎದ್ದು ತಣ್ಣೀರಿನಲ್ಲಿ ಸ್ನಾನ ಮಾಡಿ..! ಎಷ್ಟು ಲಾಭವಿದೆ ಗೊತ್ತಾ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಹುರುಪು, ಉತ್ಸಾಹದಿಂದ ಎದ್ದು ಬಂದ ಪಾರ್ವತಮ್ಮ
'ಜಾಕಿ' ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಪಾರ್ಮತಮ್ಮ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಅವರು ಅಕ್ಷರಶಃ ಮರೆಯಾಗಿದ್ದರು. ಶಿವಣ್ಣನ ಇಪ್ಪತ್ತೈದರ ಸವಿನೆನಪಿನ ಕಾರ್ಯಕ್ರಮಗಳಲ್ಲೂ ಪಾರ್ವತಮ್ಮ ಕಾಣಿಸಿಕೊಳ್ಳಲಿಲ್ಲ. ಯಾವುದೇ ಚಿತ್ರದ ಮುಹೂರ್ತ, ಕಾರ್ಯಕ್ರಮಗಳಿಗೂ ಹಾಜರಾಗಿರಲಿಲ್ಲ.
ಈಗ 'ಹುಡುಗರು' ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ತಂದಿದ್ದಾರೆ. 'ಹುಡುಗರು' ಚಿತ್ರದಂತೆ ಎಲ್ಲ ಕನ್ನಡ ಚಿತ್ರಗಳು ಶತದಿನೋತ್ಸವ ಆಚರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಪಾರ್ವತಮ್ಮನವರ ಆಗಮನ ಚಿತ್ರರಂಗಕ್ಕೆ ಮತ್ತಷ್ಟು ಲವಲವಿಕೆ ತಂದಿದೆ.
ಪಾರ್ವತಮ್ಮನವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅವರು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಪಾರ್ವತಮ್ಮನವರನ್ನು ಕಣ್ಣಿಗೆ ರೆಪ್ಪೆಯಂತೆ ನೋಡಿಕೊಂಡವರು ರಾಘವೇಂದ್ರ ರಾಜ್ ಕುಮಾರ್. ಹೊಸ ಹುರುಪು, ಉತ್ಸಾಹದದೊಂದಿಗೆ ಕನ್ನಡ ಚಿತ್ರೋದ್ಯಮಕ್ಕೆ 'ವಜ್ರೇಶ್ವರಿ'ಯ ಆಗಮನವಾಗಿದೆ. (ದಟ್ಸ್ಕನ್ನಡ ಸಿನಿವಾರ್ತೆ)