Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಿರ್ದೇಶಕ ರೇಣುಕಾ ಶರ್ಮ ತೀವ್ರ ಅಸ್ವಸ್ಥ
ಅರುವತ್ತರ ದಶಕದಲ್ಲಿ 'ಸರ್ವಜ್ಞ ಮೂರ್ತಿ' ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುವ ಮೂಲಕ ರೇಣುಕಾ ಶರ್ಮ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟಿದ್ದರು. ಶರ್ಮ ಅವರು ಪೌರಾಣಿಕ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಅರೂರು ಪಟ್ಟಾಭಿ, ಹುಣಸೂರು ಕೃಷ್ಣಮೂರ್ತಿಗಳಂತಹ ಪ್ರತಿಭಾವಂತ ನಿರ್ದೇಶಕರು ಸಹಾಯ, ಸಹಕಾರ ಸಹ ಇತ್ತು.
ಅನುಪಮ(ಅನಂತನಾಗ್, ಮಾಧವಿ, ಬಾಲಕೃಷ್ಣ ಮುಖ್ಯಭೂಮಿಕೆಯಲ್ಲಿದ್ದ ಚಿತ್ರ)ಚಿತ್ರದ ಸ್ವತಂತ್ರ ನಿರ್ದೇಶಕರಾಗಿ ಶರ್ಮಾ ಬೆಳ್ಳಿತೆರೆಗೆ ಪರಿಚಯವಾಗಿದ್ದರು. ಆ ಬಳಿಕ ಕವಿರತ್ನ ಕಾಳಿದಾಸ, ಶಬರಿಮಲೈ ಸ್ವಾಮಿ ಅಯ್ಯಪ್ಪ, ಅಂಜದ ಗಂಡು, ಅದೃಷ್ಟರೇಖೆ, ದೈವ ಶಕ್ತಿ, ಭದ್ರಕಾಳಿ, ನಮ್ಮ ಊರ ದೇವತೆ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಭರ್ಜರಿ ಗಂಡು, ಮುತ್ತೈದೆ, ಕಿಂದರಜೋಗಿ, ಕೊಲ್ಲೂರು ಶ್ರೀ ಮೂಕಾಂಬಿಕೆ ಸೇರಿದಂತೆ 20ಕ್ಕೂ ಹೆಚ್ಚು ಚಿತ್ರಗಳನ್ನು ಶರ್ಮಾ ಅವರು ನಿರ್ದೇಶಿಸಿದ್ದಾರೆ.
ಕಿರುತೆರೆಯಲ್ಲೂ ಶರ್ಮಾ ಅವರು ಹೆಸರು ಮಾಡಿದ್ದಾರೆ. ಖೋಡೆ ಸಂಸ್ಥೆಗಾಗಿ 'ಈಶ್ವರ ಅಲ್ಲಾ ನೀನೇ ಎಲ್ಲಾ' ಹಾಗೂ 'ಸಂತ ಶಿಶುನಾಳ ಶರೀಫ' ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ. ರಾಜ್ ಕುಮಾರ್ ಕುಟುಂಬ ನೀಡುವ 'ಸಿಂಗನಲ್ಲೂರು ಪುಟ್ಟಸ್ವಾಮಯ್ಯ' ಪ್ರಶಸ್ತಿ 2008ರಲ್ಲಿ ಶರ್ಮಾ ಅವರನ್ನು ವರಿಸಿತ್ತು.