Don't Miss!
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗವಿಪುರಂ ಕೊಳಗೇರಿಯಲ್ಲಿ ಯೋಗೀಶ್ 'ಧೂಳ್'
ಕಿರಿ ವಯಸ್ಸಿನಲ್ಲೇ ನಾಯಕನ ಪಟ್ಟ ಅಲಂಕರಿಸಿ, ಕನ್ನಡ ಚಿತ್ರರಂಗದ ಬೇಡಿಕೆ ನಟರಾಗಿರುವವರು ಯೋಗೀಶ್. ಸದ್ಯ ಇವರ ಅಭಿನಯದಲ್ಲಿ ಮೂಡಿ ಬರುತ್ತಿರುವ ಚಿತ್ರ 'ಧೂಳ್'. ಪ್ರಸ್ತುತ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದು, ನಗರದ ಗವೀಪುರಂನ ಸ್ಲಂನಲ್ಲಿ ಚಿತ್ರದ ಸಾಹಸ ಸನ್ನಿವೇಶ ಹಾಗೂ ಒಂದು ಗೀತೆ ಚಿತ್ರೀಕರಣಗೊಂಡಿದೆ.
ನಾಯಕ ಚಿಕ್ಕ ವಯಸ್ಸಿನಿಂದಲ್ಲೂ ದ್ವೇಷಿಸುತ್ತಿದ್ದ ವ್ಯಕ್ತಿ ಬಹಳ ದಿನಗಳ ನಂತರ ಎದುರಾಗುತ್ತಾನೆ. ಅವನನ್ನು ನೆನೆದರೆ ಕೆಂಡಾಮಂಡಲವಾಗುವ ನಾಯಕ ಎದುರು ಸಿಕ್ಕರೆ ಬಿಡುತ್ತಾನೆಯೇ? ಆಗ ಜರಗುತ್ತದೆ ಅವರಿಬ್ಬರ ನಡುವೆ ಮಾರಾಮಾರಿ. ಈ ಸಾಹಸ ಸನ್ನಿವೇಶ ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸೊಗಸಾಗಿ ಮೂಡಿ ಬಂದಿದೆ ಎಂದು ನಿರ್ದೇಶಕ ಧರಣಿ ತಿಳಿಸಿದ್ದಾರೆ.
ಶ್ರೀಸೇವಾಲಾಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ.ಎಚ್.ಸುನೀಲ್ ನಿರ್ಮಿಸುತ್ತಿರುವ 'ಧೂಳ್' ಚಿತ್ರವನ್ನು ಧರಣಿ ನಿರ್ದೇಶಿಸುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ, ಕೆ.ದತ್ತು ಛಾಯಾಗ್ರಹಣ, ಕೆ.ರಾಮ್ನಾರಾಯಣ್ ಸಂಭಾಷಣೆ, ಮೋಹನ್ ಪಂಡಿತ್ ಕಲೆ ಹಾಗೂ ರವಿವರ್ಮ ಅವರ ಸಾಹಸವಿರುವ ಈ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ಅಂದ್ರಿತಾ ರೇ, ಪ್ರಕಾಶ್ ರೈ, ಓಂಪ್ರಕಾಶ್ರಾವ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)