Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೈಮುರಿದು ಕೊಂಡ ‘ಶ್ರೀ’ ರಾಘವೇಂದ್ರ!
‘ರಿಷಿ’ ಚಿತ್ರದ ನಂತರ ತೀವ್ರ ಕುತೂಹಲ ಕೆರಳಿಸಿರುವ ವಿಜಯರಾಘವೇಂದ್ರ ಅವರ ‘ಶ್ರೀ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. 45ದಿನಗಳ ಚಿತ್ರೀಕರಣ ಮುಗಿಸಿಕೊಂಡು ಚಿತ್ರತಂಡ ಬ್ಯಾಂಕಾಂಕ್ನಿಂದ ಬೆಂಗಳೂರಿಗೆ ಮರಳಿದೆ.
ಬ್ಯಾಂಕಾಕ್ನ ಮುಆಯ್ ಥಾಯ್ ಎಂಬ ಕರಾಟೆ ಮಾದರಿಯ ಕಲೆ ಚಿತ್ರದ ವಿಶೇಷಗಳಲ್ಲಿ ಒಂದು. ಚಿತ್ರದ ಸಾಹಸ ದೃಶ್ಯಗಳಲ್ಲಿ ಡ್ಯೂಪ್ ಇಲ್ಲದೇ ನಟಿಸಿರುವ ವಿಜಯರಾಘವೇಂದ್ರರ ಭುಜಕ್ಕೆ ಪೆಟ್ಟಾಗಿದೆ. ಆದರೂ ಹಾಡಿನ ದೃಶ್ಯಗಳಲ್ಲಿ ನಟಿಸಿ ಸಹಕಾರ ನೀಡಿದ್ದಾರೆ ಎಂದು ಚಿತ್ರತಂಡ ಮೆಚ್ಚುಗೆ ವ್ಯಕ್ತಪಡಿಸಿದೆ.
ಸಾಹಸ ದೃಶ್ಯ ಮತ್ತು ನಾಲ್ಕು ಹಾಡುಗಳ ಚಿತ್ರೀಕರಣದೊಂದಿಗೆ ಮೊದಲ ಹಂತದ ಚಿತ್ರೀಕರಣ ಬ್ಯಾಂಕಾಂಕ್ನಲ್ಲಿ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭಗೊಂಡಿದೆ.
ನಿರ್ಮಾಪಕ ದುಶ್ಯಂತ್ ಮತ್ತು ನಿರ್ದೇಶಕ ಪ್ರಕಾಶ್ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ. ಕ್ಯಾಲಿಫೋರ್ನಿಯಾ ನಿವಾಸಿ ಮೀರಾ ವರ್ಮಾ ಅವರ ಬೆಲ್ಲಿ ಡ್ಯಾನ್ಸ್ ಚಿತ್ರಕ್ಕೆ ಮೆರಗು ನೀಡಿದೆಯಂತೆ.
ಇದನ್ನೂ ಓದಿ :
‘ಚಿನ್ನಾರಿ ಮುತ್ತ’ದಿಂದ ‘ಶ್ರೀ’ವರೆಗೆ
ಮುಖಪುಟ / ಸ್ಯಾಂಡಲ್ವುಡ್