Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಕ್ತ ಸಿರಿಯಾಳ ಖ್ಯಾತಿ ಚಂದೂಲಾಲರ ಹೊಸ ಚಿತ್ರ
ಭೂತಯ್ಯನ ಮಗ ಅಯ್ಯು, ಭಕ್ತ ಸಿರಿಯಾಳ, ತಬ್ಬಲಿಯು ನೀನಾದೆ ಮಗನೆ, ಗೋಧೂಳಿ, ವೀರಪ್ಪನ್, ಗಂಗವ್ವ ಗಂಗಾಮಾಯಿ, ಹೇಮಾವತಿ, ಪ್ರಾಯ ಪ್ರಾಯ ಪ್ರಾಯ, ಬೆತ್ತಲೆಸೇವೆ, ಇದು ಸಾಧ್ಯ ಮೊದಲಾದ ಚಿತ್ರಗಳನ್ನು ನಿರ್ಮಿಸಿದ ಚಂದೂಲಾಲ್ ಜೈನ್ ತಮಗೆಂದು ಸ್ವಂತ ಮನೆ ಮಾಡಿಕೊಂಡಿಲ್ಲ. ಓಡಾಡುವುದು ಕಾಲಿನಲ್ಲೇ; ಕಾರಿಲ್ಲ. ಇಸ್ಪೀಟ್ ಆಡುವ ಅಭ್ಯಾಸವಿದೆ. ಕಟ್ಟುವ ಹಣ ಐದು ಅಥವಾ ಹತ್ತು ರೂಪಾಯಿ.
ಬೇರೆ ಮೂಲದವರಾಗಿ ಕನ್ನಡ ಮಾತಾಡುತ್ತಾರಲ್ಲ ಎಂದು ಹೆಮ್ಮೆ ಪಟ್ಟುಕೊಂಡ ರಾಜ್ಕುಮಾರ್ ಇವರಿಗೆ ಕಾಲ್ಷೀಟ್ ಕೊಟ್ಟಿದ್ದರು. ಆ ಕ್ಷಣವನ್ನು ಚಂದೂಲಾಲ್ ಈಗಲೂ ಸ್ಮರಿಸುತ್ತಾರೆ. ಲವಲವಿಕೆಯಿಂದ ಬದುಕಬೇಕು ಅನ್ನೋದಷ್ಟೆ ಅವರ ಉಮೇದು. ಈ ಕಾರಣಕ್ಕೇ 'ವಿದೇಶಿ" ಎಂಬ ಸಿನಿಮಾ ನಿರ್ಮಿಸಲು ಹೊರಟಿದ್ದಾರೆ. ನಿರ್ದೇಶಕ ರವೀಂದ್ರನಾಥ್ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ.
ಅಂದಹಾಗೆ, ಜೈನ್ ಅವರಿಗೊಂದು ಸೈಟು ಕೊಡಿ ಅಂತ ಬಿಡಿಎಗೆ ಖುದ್ದು ಪಾರ್ವತಮ್ಮ ರಾಜ್ಕುಮಾರ್ ಮನವಿ ಮಾಡಿದ್ದಾರೆ. ಈ ಸಂಗತಿಯನ್ನು ಹೇಳಿದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಖಜಾಂಚಿ ಸಾ.ರಾ.ಗೋವಿಂದು.