Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಕ್ತ ಸಿರಿಯಾಳ ಖ್ಯಾತಿ ಚಂದೂಲಾಲರ ಹೊಸ ಚಿತ್ರ
ಭೂತಯ್ಯನ ಮಗ ಅಯ್ಯು, ಭಕ್ತ ಸಿರಿಯಾಳ, ತಬ್ಬಲಿಯು ನೀನಾದೆ ಮಗನೆ, ಗೋಧೂಳಿ, ವೀರಪ್ಪನ್, ಗಂಗವ್ವ ಗಂಗಾಮಾಯಿ, ಹೇಮಾವತಿ, ಪ್ರಾಯ ಪ್ರಾಯ ಪ್ರಾಯ, ಬೆತ್ತಲೆಸೇವೆ, ಇದು ಸಾಧ್ಯ ಮೊದಲಾದ ಚಿತ್ರಗಳನ್ನು ನಿರ್ಮಿಸಿದ ಚಂದೂಲಾಲ್ ಜೈನ್ ತಮಗೆಂದು ಸ್ವಂತ ಮನೆ ಮಾಡಿಕೊಂಡಿಲ್ಲ. ಓಡಾಡುವುದು ಕಾಲಿನಲ್ಲೇ; ಕಾರಿಲ್ಲ. ಇಸ್ಪೀಟ್ ಆಡುವ ಅಭ್ಯಾಸವಿದೆ. ಕಟ್ಟುವ ಹಣ ಐದು ಅಥವಾ ಹತ್ತು ರೂಪಾಯಿ.
ಬೇರೆ ಮೂಲದವರಾಗಿ ಕನ್ನಡ ಮಾತಾಡುತ್ತಾರಲ್ಲ ಎಂದು ಹೆಮ್ಮೆ ಪಟ್ಟುಕೊಂಡ ರಾಜ್ಕುಮಾರ್ ಇವರಿಗೆ ಕಾಲ್ಷೀಟ್ ಕೊಟ್ಟಿದ್ದರು. ಆ ಕ್ಷಣವನ್ನು ಚಂದೂಲಾಲ್ ಈಗಲೂ ಸ್ಮರಿಸುತ್ತಾರೆ. ಲವಲವಿಕೆಯಿಂದ ಬದುಕಬೇಕು ಅನ್ನೋದಷ್ಟೆ ಅವರ ಉಮೇದು. ಈ ಕಾರಣಕ್ಕೇ 'ವಿದೇಶಿ" ಎಂಬ ಸಿನಿಮಾ ನಿರ್ಮಿಸಲು ಹೊರಟಿದ್ದಾರೆ. ನಿರ್ದೇಶಕ ರವೀಂದ್ರನಾಥ್ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ.
ಅಂದಹಾಗೆ, ಜೈನ್ ಅವರಿಗೊಂದು ಸೈಟು ಕೊಡಿ ಅಂತ ಬಿಡಿಎಗೆ ಖುದ್ದು ಪಾರ್ವತಮ್ಮ ರಾಜ್ಕುಮಾರ್ ಮನವಿ ಮಾಡಿದ್ದಾರೆ. ಈ ಸಂಗತಿಯನ್ನು ಹೇಳಿದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಖಜಾಂಚಿ ಸಾ.ರಾ.ಗೋವಿಂದು.