Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರ್ಷ್ ರಾಮ್ರಿಂದ ಪರಿಸರ ಕಾಳಿಜಿಯ ಮಕ್ಕಳ ಚಿತ್ರ
ಅಮೆರಿಕದ ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಕೂಟದ ಸದಸ್ಯ ಹರ್ಷ ರಾಮ್ ಡಿ.ಆರ್. ಅವರು ಪರಿಸರ ಕಾಳಜಿಯ ಮಕ್ಕಳ ಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರ ಖ್ಯಾತ ಸಾಹಿತಿ ನಾ ಡಿಸೋಜಾ ಅವರ 'ಬೆಟ್ಟದ ಪುರದ ದಿಟ್ಟರು' ಕಾದಂಬರಿಯನ್ನು ಆಧರಿಸಿದೆ. ಚಿತ್ರಕ್ಕೆ ಇನ್ನೂ ಹೆಸರನ್ನು ಇಟ್ಟಿಲ್ಲ. ಉದ್ಭವ ಮತ್ತು ಮಿಸ್ ಕ್ಯಾಲಿಫೋರ್ನಿಯಾ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕೋಡ್ಲು ರಾಮಕೃಷ್ಣ ಈ ಮಕ್ಕಳ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ನೈಸರ್ಗಿಕ ಸಂಪತ್ತನ್ನು ಕಾಪಾಡಲು ದುಷ್ಟಶಕ್ತಿಗಳ ವಿರುದ್ಧ ಮಕ್ಕಳು ಹೋರಾಟ ಸಾರುವ ಕಥಾವಸ್ತುವುಳ್ಳ ಈ ಚಿತ್ರದಲ್ಲಿ ಪ್ರಮುಖ ಭೂಮಿಕೆಯಲ್ಲಿ ಮಕ್ಕಳೇ ಇದ್ದಾರೆಂದು ಬೇರೆಯಾಗಿ ಹೇಳಬೇಕಾಗಿಲ್ಲ. ಮಾಸ್ಟರ್ ಶಶಾಂಕ್, ಮಾಸ್ಟರ್ ಸಮುದ್ರ ಮೊದಲಾದ ಪುಟಾಣಿಗಳು ಆಯ್ಕೆಯಾಗಿದ್ದಾರೆ. ಮಕ್ಕಳನ್ನು ತಿದ್ದುವ, ಪ್ರಕೃತಿಯ ರಕ್ಷಣೆಗೆ ಮಕ್ಕಳನ್ನು ಹುರಿದುಂಬಿಸುವ ಪಾತ್ರದಲ್ಲಿ ನಿರ್ಮಾಪಕರಾದ ಹರ್ಷ್ ರಾಮ್ ಅವರೇ ಅಭಿನಯಿಸುತ್ತಿದ್ದಾರೆ.
ಇವರೊಂದಿಗೆ ಹಿರಿಯ ನಟ ಶ್ರೀನಿವಾಸ ಮೂರ್ತಿ, ಪದ್ಮಾ ವಾಸಂತಿ, ಬ್ಯಾಂಕ್ ಜನಾರ್ಧನ, ಕರಿಬಸವಯ್ಯ, ರಥಸಪ್ತಮಿ ಅರವಿಂದ್, ಜೋಸೈಮನ್, ಸ್ವಸ್ತಿಕ್ ಶಂಕರ್ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇನ್ನೊಂದು ಪ್ರಮುಖ ಪಾತ್ರಕ್ಕೆ ಅನಂತ್ನಾಗ್ ಅಥವಾ ಗಿರೀಶ್ ಕಾರ್ನಾಡ್ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ನಿರ್ಮಾಪಕರಾದ ಹರ್ಷ್ ರಾಮ್ ದಟ್ಸ್ಕನ್ನಡಕ್ಕೆ ತಿಳಿಸಿದರು.
ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಆಗಸ್ಟ್ ಮಧ್ಯದ ವೇಳೆಗೆ ಚಿತ್ರೀಕರಣ ಮುಗಿಯುವ ಸಾಧ್ಯತೆಯಿದೆ. ಅಕ್ಟೋಬರ್ 2 ಗಾಂಧಿ ಜಯಂತಿಯಂದು ಚಿತ್ರವನ್ನು ನಾಡಿನಾದ್ಯಂತ ಬಿಡುಗಡೆ ಮಾಡಬೇಕೆಂದು ಹರ್ಷ ತೀರ್ಮಾನಿಸಿದ್ದಾರೆ. ಆಗ ಶಾಲೆಗೆ ದಸರಾ ರಜೆಯೂ ಇರುವುದರಿಂದ ಶಾಲಾಮಕ್ಕಳಿಗೆ ಚಿತ್ರ ನೋಡಲು ಅನುಕೂಲವಾಗುತ್ತದೆಂದು ಹರ್ಷ್ ತಿಳಿಸಿದರು.
ವಿ. ಮನೋಹರ್ ಅವರು ಸಾಹಿತ್ಯ ಮತ್ತು ಸಂಗೀತ ಒದಗಿಸಿದ್ದಾರೆ. ಜೆ.ಎಮ್. ಪ್ರಹ್ಲಾದ್ ಸಂಭಾಷಣೆ ಬರೆದಿದ್ದಾರೆ.