Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಟರ್ಸ್ Vs ಫೈಟರ್ ಗೆ ವರುಣನೇ ಅಂಪೈರ್
ಡಾ.ರಾಜ್ ಕಪ್ ಆರಂಭ ಆಟದ ಟಾಸ್ ಹಾಕುವ ಮುನ್ನವೇ , ಆಟಗಾರರು ಪ್ಯಾಡ್ ಕಟ್ಟುವ ಮುನ್ನವೇ ಕಲಾವಿದರುಗಳು ತೊಡೆತಟ್ಟಿ ಒಂದಿಷ್ಟು ಬಂಡಾಯ ರಾಗ ಹಾಡಿದ್ದು ಈಗ ಹಳೆ ಕಥೆ.
ಈ ಅಪಸ್ವರ ಮುಗಿಲು ಮುಟ್ಟುವ ಮುನ್ನವೇ ತಣ್ಣಗಾಗಿ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎನ್ನುವಷ್ಟರಲ್ಲೇ ವರುಣ ದೇವ ಅಡ್ಡಲಾಗಿ ನಿಲ್ಲುವ ಎಲ್ಲ ಸೂಚನೆಗಳು ಕಂಡು ಬಂದಿದೆ.
ಹೌದು, ಇಂದಿನಿಂದ ದಾವಣಗೆರೆಯಲ್ಲಿ ಸ್ಯಾಂಡಲ್ವುಡ್ ಕಲಾವಿದರ 'ಡಾ. ರಾಜ್ ಕಪ್' ಟ್ವೆಂಟಿ-20 ಚಾಂಪಿಯನ್ಶಿಪ್ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸುದೀಪ್ ಹಾಗೂ ಥ್ರಿಲ್ಲರ್ ಮಂಜು, ದುನಿಯಾ ವಿಜಯ್ ತಂಡಗಳು ಸೆಣಸಲಿವೆ. ಆದರೆ, ಮಳೆರಾಯನಿಗೆ ಹೆದರಿಕೊಂಡೇ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ.
ಅಭ್ಯಾಸ ಪಂದ್ಯಕ್ಕೆ ತಪ್ಪದೆ ಬರುತ್ತಿದ್ದದುನಿಯಾ ವಿಜಯ್ ಮೈದಾನಕ್ಕೆ ಇಳಿಯುವುದು ಗ್ಯಾರಂಟಿ ಎನ್ನಲಾಗಿದೆ. ಯುವಕಲಾವಿದರಾದ ಯಶ್, ಚಿರಂಜೀವಿ ಸರ್ಜಾ, ಚೇತನ್,ಲೂಸ್ ಮಾದ ಯೋಗೇಶ್ ಮಾತ್ರ ಬ್ಯಾಟ್ ಬೀಸಿ ಸಿಕ್ಸರ್ ಎತ್ತಲು ಸಜ್ಜಾಗಿದ್ದಾರೆ. ಇದಕ್ಕಾಗಿ ಭಾರಿ ತಯಾರಿ ನಡೆಸುತ್ತಿದ್ದಾರೆ.
ಪಂದ್ಯಗಳ ವೀಕ್ಷಣೆಗೆ ಟಿಕೆಟ್ ನಿಗದಿಪಡೆಸಿದ್ದು, ಇದರಿಂದ ಬರುವ ಎಲ್ಲಾ ಹಣ ನೃತ್ಯ ನಿರ್ದೇಶಕರ ಮತ್ತು ನೃತ್ಯ ಕಲಾವಿದರ ಕ್ಷೇಮಾಭಿವೃದ್ಧಿ ಸಂಘಕ್ಕೆ ಹೋಗಲಿದೆ. ಇಂದಿನ ಎರಡನೇ ಪಂದ್ಯದಲ್ಲಿ ಸಚಿವ ಶ್ರೀರಾಮುಲು ಮುಂದಾಳತ್ವದ ಶಾಸಕರ ತಂಡ ದಿಂಗಂತ್ ಮತ್ತು ಯೋಗಿ ನೇತೃತ್ವದ ತಂಡವನ್ನು ಎದುರಿಸಲಿದೆ.