Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಚಿತ್ರ ನಿರ್ದೇಶನಕ್ಕೆ ಅರ್ಜುನ್ ಸರ್ಜಾ
''ಕತೆ, ಚಿತ್ರಕತೆಯನ್ನು ಈಗಾಗಲೇ ಸಿದ್ಧಪಡಿಸಿಕೊಂಡಿದ್ದೇನೆ. ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯನ್ನು ಅಂತಿಮಗೊಳಿಸಬೇಕಾಗಿದೆ. ಚಿತ್ರಕತೆಯನ್ನು ಕೈಗೆತ್ತಿಕೊಂಡಾಗ ಇದನ್ನು ಹಿಂದಿಯಲ್ಲಿ ಮಾಡಿದರೇನೆ ಉತ್ತಮ ಅನ್ನಿಸಿತು ಹಾಗಾಗಿ ಈ ಚಿತ್ರವನ್ನು ಹಿಂದಿಯಲ್ಲಿ ಮಾಡುತ್ತಿರುವುದಾಗಿ ಅರ್ಜುನ್ ತಿಳಿಸಿದ್ದಾರೆ.
ಸಾಹಸ ಪಾತ್ರಗಳಿಗೆ ಹೆಸರಾದವರು ಅರ್ಜುನ್ ಸರ್ಜಾ. ದಕ್ಷಿಣದ ಭಾರತದಲ್ಲಿ ಪ್ರಮುಖ ನಿರ್ಮಾಪಕರಾಗಿಯೂ ಹೆಸರು ಮಾಡಿದವರು. ಪ್ರಸ್ತುತ ಅರ್ಜುನ್ ಸರ್ಜಾ ಕನ್ನಡದಲ್ಲಿ 'ವಾಯುಪುತ್ರ'ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ಅವರ ಸಹೋದರ ಕಿಶೋರ್ ಸರ್ಜಾ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಪ್ರಧಾನ ಪಾತ್ರಗಳಲ್ಲಿ ಅಂದ್ರಿತಾ ರೇ, ಅರ್ಜುನ್ ಸರ್ಜಾ ಸೋದರಳಿಯ ಚಿರಂಜೀವಿ ಮತ್ತು ಅಂಬರೀಶ್ ಕಾಣಿಸಲಿದ್ದಾರೆ. ಚಿತ್ರ ನಿರ್ಮಾಣ ನಂತರದ ಚಟುವಟಿಕೆಗಳಲ್ಲಿದೆ.
''ವಾಯುಪುತ್ರ ಚಿತ್ರವನ್ನು ಜೂನ್ ತಿಂಗಳ ಕೊನೆಯಲ್ಲಿ ಅಥವಾ ಜುಲೈ ಮೊದಲ ವಾರದಲ್ಲಿ ತೆರೆಗೆ ತರಲು ಯೋಚಿಸುತ್ತಿದ್ದೇವೆ. ರಾಮು ನಿರ್ಮಾಣದ ಮತ್ತೊಂದು ಚಿತ್ರದಲ್ಲಿ ನಾನು ನಟಿಸಲಿದ್ದೇನೆ. ರಾಮು ಅವರ ಚಿತ್ರ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಲಿದೆ '' ಎಂದು ಅರ್ಜುನ್ ಸರ್ಜಾ ಹೇಳಿದರು. ಬೆಂಗಳೂರು ಮೂಲದ ಅರ್ಜುನ್ ಸರ್ಜಾ ಬಾಲ ಕಲಾವಿದನಾಗಿ 'ಸಿಂಹದ ಮರಿ ಸೈನ್ಯ' ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟಿದ್ದರು. ಕನ್ನಡ, ಹಿಂದಿ ಸೇರಿದಂತೆ ಪಂಚ ಭಾಷೆಗಳಲ್ಲಿ ಅರ್ಜುನ್ ಇದುವರೆಗೂ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)