ವಿ ಹರಿಕೃಷ್ಣ ನಿರ್ಮಾಣದಲ್ಲಿ ಅಜಯ್ ರಾವ್ ಹೀರೋ

By Rajendra

V Harikrishna turns producer
ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ಈ ಹಿಂದೆ ಅವರು ದರ್ಶನ್ ಅವರ 'ಬುಲ್ ಬುಲ್' ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಈಗ ಪೂರ್ಣ ಪ್ರಮಾಣದ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ನಾಯಕ ನಟ ಅಜಯ್ ರಾವ್.

ಎಸ್ ವಿ ಬಾಬು ಅವರ 'ಸಂಗಮ' ಚಿತ್ರವನ್ನು ನಿರ್ದೇಶಿಸಿದ್ದ ರವಿವರ್ಮ ಆಕ್ಷನ್ ಕಟ್‌ನಲ್ಲಿ ಹರಿಕೃಷ್ಣ ಅವರ ಚಿತ್ರ ಮೂಡಿಬರಲಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಚಿತ್ರವನ್ನು ಎಸ್ ವಿ ಬಾಬು ಅವರೇ ನಿರ್ಮಿಸಬೇಕಾಗಿತ್ತು. ಆದರೆ ಬಾಬು ನಿರ್ಮಾಣದ ತೆಲುಗು ಚಿತ್ರ 'ಕೆರಟಂ' ಮಕಾಡೆ ಮಲಗಿದ ಕಾರಣ ಅವರು ಚಿತ್ರವನ್ನು ಕೈಬಿಟ್ಟಿದ್ದರು.

ಈಗ ಅದೇ ಚಿತ್ರವನ್ನು ವಿ ಹರಿಕೃಷ್ಣ ನಿರ್ಮಿಸಲು ಮುಂದಾಗಿದ್ದಾರೆ. ಶೀಘ್ರದಲ್ಲೆ ಈ ಚಿತ್ರ ಸೆಟ್ಟೇರಲಿದೆ. ಚಿತ್ರಕ್ಕೆ ರಮ್ಯಾ ನಂಬೀಸನ್ ನಾಯಕಿಯಾಗುವ ಸಾಧ್ಯತೆಗಳಿವೆ. ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಸದ್ಯಕ್ಕೆ ಸಂಗೀತ ಸಂಯೋಜನೆಯಲ್ಲಿ ಹರಿಕೃಷ್ಣ ಬ್ಯುಸಿಯಾಗಿದ್ದಾರೆ. (ಒನ್‌ಇಂಡಿಯಾ ಕನ್ನಡ)

More from Filmibeat

English summary
Music director V Harikrishna turned into a full fledged producer. The film is all set to be launched shortly. Ajay Rao has been selected as hero and Ravi Varma as a director.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X