twitter
    For Quick Alerts
    ALLOW NOTIFICATIONS  
    For Daily Alerts

    ವಿ ಹರಿಕೃಷ್ಣ ನಿರ್ಮಾಣದಲ್ಲಿ ಅಜಯ್ ರಾವ್ ಹೀರೋ

    By Rajendra
    |

    V Harikrishna turns producer
    ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ಈ ಹಿಂದೆ ಅವರು ದರ್ಶನ್ ಅವರ 'ಬುಲ್ ಬುಲ್' ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಈಗ ಪೂರ್ಣ ಪ್ರಮಾಣದ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ನಾಯಕ ನಟ ಅಜಯ್ ರಾವ್.

    ಎಸ್ ವಿ ಬಾಬು ಅವರ 'ಸಂಗಮ' ಚಿತ್ರವನ್ನು ನಿರ್ದೇಶಿಸಿದ್ದ ರವಿವರ್ಮ ಆಕ್ಷನ್ ಕಟ್‌ನಲ್ಲಿ ಹರಿಕೃಷ್ಣ ಅವರ ಚಿತ್ರ ಮೂಡಿಬರಲಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಚಿತ್ರವನ್ನು ಎಸ್ ವಿ ಬಾಬು ಅವರೇ ನಿರ್ಮಿಸಬೇಕಾಗಿತ್ತು. ಆದರೆ ಬಾಬು ನಿರ್ಮಾಣದ ತೆಲುಗು ಚಿತ್ರ 'ಕೆರಟಂ' ಮಕಾಡೆ ಮಲಗಿದ ಕಾರಣ ಅವರು ಚಿತ್ರವನ್ನು ಕೈಬಿಟ್ಟಿದ್ದರು.

    ಈಗ ಅದೇ ಚಿತ್ರವನ್ನು ವಿ ಹರಿಕೃಷ್ಣ ನಿರ್ಮಿಸಲು ಮುಂದಾಗಿದ್ದಾರೆ. ಶೀಘ್ರದಲ್ಲೆ ಈ ಚಿತ್ರ ಸೆಟ್ಟೇರಲಿದೆ. ಚಿತ್ರಕ್ಕೆ ರಮ್ಯಾ ನಂಬೀಸನ್ ನಾಯಕಿಯಾಗುವ ಸಾಧ್ಯತೆಗಳಿವೆ. ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಸದ್ಯಕ್ಕೆ ಸಂಗೀತ ಸಂಯೋಜನೆಯಲ್ಲಿ ಹರಿಕೃಷ್ಣ ಬ್ಯುಸಿಯಾಗಿದ್ದಾರೆ. (ಒನ್‌ಇಂಡಿಯಾ ಕನ್ನಡ)

    English summary
    Music director V Harikrishna turned into a full fledged producer. The film is all set to be launched shortly. Ajay Rao has been selected as hero and Ravi Varma as a director.
    Wednesday, November 23, 2011, 22:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X