Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ ಗುಣಮುಖರಾಗಲು ಪಿ ವಾಸು ವಿಶೇಷ ಪೂಜೆ
ಖ್ಯಾತ ನಟ ಸೂಪರ್ಸ್ಟಾರ್ ರಜನಿಕಾಂತ್ ಶೀಘ್ರ ಗುಣಮುಖರಾಗಲೆಂದು ಮೈಸೂರಿನ ಶ್ರೀಚಾಮುಂಡೇಶ್ವರಿಗೆ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪಿ.ವಾಸು ವೀಶೇಷ ಪೂಜೆ ಸಲ್ಲಿಸಿದರು. ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ 'ಆಪ್ತಮಿತ್ರ', 'ಆಪ್ತರಕ್ಷಕ' ಚಿತ್ರಗಳನ್ನು ಪಿ.ವಾಸು ನಿರ್ದೇಶಿಸಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.
ವಾಸು ಅವರ ನೂತನ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಉಪೇಂದ್ರ ನಾಯಕನಾಗಿರುವ ಈ ಚಿತ್ರವನ್ನು ಕೃಷ್ಣಪ್ರಜ್ವಲ್ ನಿರ್ಮಿಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ಪಿ.ವಾಸು ಅವರು ರಜನಿಕಾಂತ್ ಅವರು ಶೀಘ್ರ ಗುಣಮುಖರಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳವಂತಾಗಬೇಕೆಂದು ಚಾಮುಂಡಿ ತಾಯಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಉದಯರವಿ ಫಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 'ಆಪ್ತರಕ್ಷಕ' ಚಿತ್ರದ ನಂತರ ಇವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಐದು ಹಾಡುಗಳು ಚಿತ್ರದಲ್ಲಿದೆ. ಈ ಪೈಕಿ ಎರಡು ಹಾಡುಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ ಎನ್ನುತ್ತಾರೆ ನಿರ್ಮಾಪಕರು. (ದಟ್ಸ್ಕನ್ನಡ ಸಿನಿವಾರ್ತೆ)