Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆಯಲ್ಲೇ ಕೂತು ಅಣ್ಣಾಗೆ ಜೈ ಎಂದ ರಜನಿಕಾಂತ್!
ಭ್ರಷ್ಟಾಚಾರವನ್ನು ಮಟ್ಟಹಾಕಲು ಜನಲೋಕಪಾಲ ವಿಧೇಯಕಕ್ಕೆ ಆಗ್ರಹಿಸುತ್ತಿರುವ ಗಾಂಧಿವಾದಿ ಅಣ್ಣಾ ಹಜಾರೆ ಅವರೆ ನನ್ನ ಹೀರೋ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಸಖತ್ ಡೈಲಾಗ್ ಹೊಡೆದಿದ್ದಾರೆ. ಚೆನ್ನೈನ ತಮ್ಮ ಕಚೇರಿ ಮೂಲಕ ಅಣ್ಣಾಗೆ ಬೆಂಬಲ ವ್ಯಕ್ತಪಡಿಸಿ ಮಂಗಳವಾರ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಭಾರತ ಚಳವಳಿಯನ್ನು ನಾನು ಮನಸಾರೆ ಬೆಂಬಲಿಸುತ್ತಿದ್ದೇನೆ. ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ನಮ್ಮೆಲ್ಲರಿಗೆ ಅಣ್ಣಾ ಹಜಾರೆ ಅವರಂಥಹ ದಕ್ಷ, ಸಮರ್ಥ ನಾಯಕ ಸಿಕ್ಕಿರುವುದು ಸಂತಸದ ಸಂಗತಿ ಎಂಬ ಹೇಳಿಕೆಗಳು ರಜನಿ ಅವರ ಸಂದೇಶದಲ್ಲಿ ಅಡಗಿವೆ.
ಈ ರಕ್ತರಹಿತ ಕ್ರಾಂತಿಯನ್ನು ಬೆಂಬಲಿಸುತ್ತಿರುವ ಪ್ರತಿಯೊಬ್ಬರನ್ನೂ ನಾನು ಅಭಿನಂದಿಸುತ್ತೇನೆ. ಈ ರೀತಿಯ ಶಾಂತಿಯುತ ಪ್ರತಿಭಟನೆ ಸತ್ಯಾಗ್ರಹದ ತವರೂರಾದ ಭಾರತದಲ್ಲಿ ಮಾತ್ರ ಸಾಧ್ಯ ಎಂದಿದ್ದಾರೆ ರಜನಿ. ತಮಿಳು ಚಿತ್ರೋದ್ಯಮ ಅಣ್ಣಾಗೆ ಬೆಂಬಲ ಸೂಚಿಸಿ ಪ್ರತಿಭಟಿಸಿದೆ. ಆದರೆ ರಜನಿ ಮಾತ್ರ ಮನೆಬಿಟ್ಟು ಹೊರಬರದೆ ಇರುವುದು ಅವರ ಅಪಾರ ಅಭಿಮಾನಿ ಬಳಗವನ್ನು ನಿರಾಸೆಗೊಳಿಸಿದೆ. (ಏಜೆನ್ಸೀಸ್)