Don't Miss!
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿ ಮಹಾದೇವಪ್ಪ ಸೇರಿ ಮೂವರಿಗೆ ಅಪ್ಪಾಜಿ ಪ್ರಶಸ್ತಿ
ಈ ಪ್ರಶಸ್ತಿಗಳನ್ನು ಅಪ್ಪಾಜಿ ಏ.23ರಂದು ಲೀ ಮೆರಿಡಿಯನ್ ಹೊಟೇಲಿನಲ್ಲಿ ನಡೆಸಲಾಗುವ ಸರಳ ಸಮಾರಂಭದಲ್ಲಿ ರಾಜ್ ಅವರೊಂದಿಗೆ ಅನೇಕ ವರ್ಷಗಳ ಕಾಲ ಕಲಾವಿದರಾಗಿ ದುಡಿದ ಮೂವರು ಮಹನೀಯರಿಗೆ ಪ್ರಶಸ್ತಿ ನೀಡುತ್ತಿರುವುದಾಗಿ ರಾಜ್ ಅವರ ಎರಡನೇ ಮಗ ರಾಘವೇಂದ್ರ ರಾಜಕುಮಾರ್ ತಿಳಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ 3 ಗಂಟೆಗೆ ನಡೆಯಲಿದೆ.
ಹಿರಿಯ ಕಲಾವಿದ ಶನಿ ಮಹಾದೇವಪ್ಪ ಮತ್ತು ಬೆಂಗಳೂರು ನಾಗೇಶ್ ಅವರು ಆರ್ಥಿಕವಾಗಿ ಸಂಕಷ್ಟ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರಕಟವಾಗಿರುವುದು ರಾಜ್ ಆತ್ಮಕ್ಕೆ ಶಾಂತಿ ನೀಡುವಂತಿದೆ. ಶನಿ ಮಹಾದೇವಪ್ಪ ಅವರು ರಾಜ್ ನಟಿಸಿದ್ದ ಕವಿರತ್ನ ಕಾಳಿದಾಸ ಚಿತ್ರದಲ್ಲಿ ಡಿಂಡಿಮ ಕವಿಯಾಗಿ ಮನೋಜ್ಞವಾಗಿ ನಟಿಸಿದ್ದರು. ಈ ಚಿತ್ರ ಸೇರಿದಂತೆ ಮಹಾದೇವಪ್ಪ ಅವರು ರಾಜ್ ಜೊತೆ ಅನೇಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಪ್ರತಿ ವರ್ಷ ರಾಜ್ ಹುಟ್ಟುಹಬ್ಬ(ಏ.24)ದಂದು ಕನ್ನಡ ಚಿತ್ರರಂಗದಲ್ಲಿ ಅವಿರತವಾಗಿ ಶ್ರಮಿಸಿರುವ ಮೂವರು ಅರ್ಹ ಕಲಾವಿದರಿಗೆ ಪ್ರಶಸ್ತಿ ನೀಡುವ ಪರಿಪಾಠವನ್ನು ರಾಜ್ ಕುಟುಂಬ ಬೆಳೆಸಿಕೊಂಡು ಬಂದಿದೆ. ಕಳೆದ ವರ್ಷ ನಿರ್ದೇಶಕ ಭಗವಾಗನ್, ನಟಿ ಶಾಂತಮ್ಮ ಮತ್ತು ನಟ ಶಿವರಾಂ ಅವರಿಗೆ ನೀಡಲಾಗಿತ್ತು. ಪ್ರಶಸ್ತಿ 1 ಲಕ್ಷ ರು., ಪ್ರಶಸ್ತಿ ಫಲಕ ಮತ್ತು ಶಾಲನ್ನು ಒಳಗೊಂಡಿರುತ್ತದೆ.