Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಚಾ ನಿರ್ಮಾಪಕ ಎಸ್.ಮಾದೇಶ್ ನಿಧನ
ಅವರು ಮೂರು ವರ್ಷಗಳಿಂದ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ಅವರ ಮೂತ್ರಪಿಂಡಗಳು ಸಹ ವಿಫಲವಾಗಿದ್ದವು.ಕೆಲದಿನಗಳ ಹಿಂದಷ್ಟೇ ಮೆದುಳಿನ ಸ್ಟ್ರೋಕ್ ಆಗಿ ಚಿಕಿತ್ಸೆಗಾಗಿ ಮಾದೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವರಾಜ್ ಕುಮಾರ್ ನಾಯಕ ನಟನಾಗಿ ಹೊಸ ಚಿತ್ರವನ್ನು ಮಾದೇಶ ಅವರು ನಿರ್ಮಿಸುವ ಯೋಜನೆಯೂ ಇತ್ತು. ಇದಕ್ಕಾಗಿ ಚಿತ್ರಕತೆ ಮತ್ತು ಸಾಹಿತ್ಯವನ್ನು ಹೃದಯಶಿವ ಅವದು ಸಿದ್ಧಪಡಿಸಿಕೊಂಡಿದ್ದರು.
ಎರಡು ಬಾರ್ ಮತ್ತು ರೆಸ್ಟೋರೆಂಟ್ ಒಂದನ್ನು ಮಾದೇಶ್ ಅವರು ಭೋಗ್ಯಕ್ಕೆ ಪಡೆದಿದ್ದು 'ಸಾಚಾ' ಚಿತ್ರದ ಮೂಲಕ ತಮ್ಮ ಸಹೋದರ ವಿಕ್ಕಿ ಅವರನ್ನು ಹೀರೋ ಮಾಡಲು ಹೊರಟಿದ್ದರು. ಸುಮಾರು 1.5 ಕೋಟಿ ರು.ಗಳನ್ನು ಸಾಚಾ ಚಿತ್ರಕ್ಕಾಗಿ ಹೂಡಿದ್ದಾರೆ. ಇನ್ನೇನು ಅವರ ಕನಸು ನನಸಾಯಿತು ಎನ್ನುವಷ್ಟರಲ್ಲಿ ವಿಧಿ ಅವರನ್ನು ಬಹಳಷ್ಟು ದೂರಕ್ಕೆ ಕರೆದೊಯ್ದು ಬಿಟ್ಟಿತು. ಚಿತ್ರ ತೆರೆಕಾಣುವ ಮುನ್ನವೇ ಅವರು ಕಣ್ಮುಚ್ಚಿರುವುದು ' ಸಾಚಾ' ಚಿತ್ರತಂಡವನ್ನು ನೋವಿನ ಮಡುವಿಗೆ ನೂಕಿದೆ.
ಸಾಚಾ ಚಿತ್ರವನ್ನು ರಾಜ್ ಎಂಬುವವರು ನಿರ್ದೇಶಿಸುತ್ತಿದ್ದು ಚಿತ್ರಕ್ಕೆ ಖ್ಯಾತ ಹಿಂದೂಸ್ತಾನಿ ಗಾಯಕ ಪರಮೇಶ್ವರ ಹೆಗಡೆ ಸಂಗೀತ ಸಂಯೋಜಿಸಿದ್ದರು. ಸಾಚಾ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ (ಡಿ.18, 2008)ಮಾದೇಶ್ ಅವರು ಲವಲವಿಕೆಯಿಂದ ಪಾಲ್ಗೊಂಡಿದ್ದರು. ಆದರೆ ಇಷ್ಟು ಬೇಗ ಅವರನ್ನು ವಿಧಿ ಕರೆದೊಯ್ಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ.
(ದಟ್ಸ್ ಕನ್ನಡ ಚಿತ್ರವಾರ್ತೆ)