Don't Miss!
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಾರಥಿ' ಚಿತ್ರೀಕರಣದಲ್ಲಿ ಶರತ್ ಕುಮಾರ್ ಗೆ ಗಾಯ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಹೊಚ್ಚ ಹೊಸ ಚಿತ್ರ 'ಸಾರಥಿ'. ಈ ಚಿತ್ರದಲ್ಲಿ ನಡಿಗರ್ ಸಂಘಂ (ಕಲಾವಿದರ ಸಂಘ ಎಂದರ್ಥ) ಅಧ್ಯಕ್ಷ ಶರತ್ ಕುಮಾರ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 'ಸಾರಥಿ' ಚಿತ್ರದ ಸಾಹಸ ಚಿತ್ರೀಕರಣದ ವೇಳೆ ಶರತ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಸದ್ಯಕ್ಕೆ ಪಾಂಡಿಚೆರಿಯಲ್ಲಿ 'ಸಾರಥಿ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸಾಹಸ ಸನ್ನಿವೇಶಕ್ಕಾಗಿ ಪಾಲ್ಗೊಂಡಿದ್ದ ಶರತ್ ಕುಮಾರ್ ಕುದುರೆ ಸವಾರಿ ಮಾಡುವ ವೇಳೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಅಸಾಧ್ಯ ನೋವಿನಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಂಟದ ಮೂಳೆ ಮುರಿದಿರುವುದಾಗಿ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ದಿನಕರ್ ತೂಗುದೀಪ ಆಕ್ಷನ್, ಕಟ್ ಹೇಳುತ್ತಿರುವ ಸಾರಥಿ ಚಿತ್ರದಲ್ಲಿ ಶರತ್ ಕುಮಾರ್ ಅವರದು ಮಹತ್ವದ ಪಾತ್ರ. ಅಂಬ್ಯುಲೆನ್ಸ್ ಮೂಲಕ ಶರತ್ ಕುಮಾರ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯಕ್ಕೆ ಶರತ್ ಕುಮಾರ್ ತಮ್ಮ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ಒಂದು ತಿಂಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದು ಯಾವುದೇ ಚಿತ್ರೀಕರಣದಲ್ಲಿ ಭಾಗವಹಿಸಬಾರದು ಎಂದು ತಾಕೀತು ಮಾಡಿದ್ದಾರೆ. ಶರತ್ ಕುಮಾರ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಅವರು ನಟಿಸುತ್ತಿರುವ ತಮಿಳು ಚಿತ್ರಗಳ ಚಿತ್ರೀಕರಣವನ್ನು ಮುಂದೂಡಲಾಗಿದೆ.