Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಣಿದ ಯೋಗರಾಜ್ ಭಟ್ ಅವರಿಗೆ ಪ್ರಕೃತಿ ಚಿಕಿತ್ಸೆ
ಬೆಂಗಳೂರು, ಜ 23 : ಮುಂಗಾರು ಮಳೆ ಮತ್ತು ಇತ್ತೀಚೆಗೆ ಬಿಡುಗಡೆಯಾದ ಗಾಳಿಪಟ ಚಿತ್ರಖ್ಯಾತಿಯ ನಿರ್ದೇಶಕ ಯೋಗರಾಜ್ ಭಟ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಚಿಕಿತ್ಸೆ ಮತ್ತು ವಿಶ್ರಾಂತಿಯನ್ನು ಏಕಕಾಲಕ್ಕೆ ಪಡೆಯುವ ಸಲುವಾಗಿ ಅವರು ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ಬುಧವಾರ ಬೆಳಗ್ಗೆ ದಾಖಲಾದರು.
ಕಳೆದ ಎರಡು ವರ್ಷಗಳಿಂದ ಸತತವಾಗಿ ಸಿನಿಮಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಭಟ್ ಸಹಜವಾಗಿಯೇ ದಣಿದಿದ್ದಾರೆ. ವಿಶ್ರಾಂತಿಯನ್ನು ಲೆಕ್ಕಿಸದೆ ಹಗಲೂ ಮೂರೂ ಹೊತ್ತು ಕೆಲಸ ಮತ್ತು ಚಿತ್ರಕರ್ಮಿಯಾಗಿ ಆಲೋಚನೆಗಳಲ್ಲಿ ಮುಳುಗಿದ್ದರಿಂದ ಅವರಿಗೆ ಆಯಾಸವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಕತ್ತಿನಲ್ಲಿ ಉಳುಕು ಮತ್ತು ಮಂಡಿನೋವಿನಿಂದ ಬಳಲುತ್ತಿರುವ ಅವರಿಗೆ ಸೂಕ್ತ ಆರೈಕೆ ಮತ್ತು ಉಪಚಾರದ ಅಗತ್ಯವಿದೆ. ಆದ್ದರಿಂದ ಪ್ರಕೃತಿ ಚಿಕಿತ್ಸೆಯನ್ನು ಅರಸಿ ಧರ್ಮಸ್ಥಳಕ್ಕೆ ಬಂದೆವು ಎಂದು ಅವರ ಕುಟುಂಬದ ಸದಸ್ಯರು ದಟ್ಸ್ ಕನ್ನಡಕ್ಕೆ ತಿಳಿಸಿದರು. ಭಟ್ ಅವರು ಸುಮಾರು ಹತ್ತುದಿವಸಗಳ ಪ್ರಕೃತಿ ಚಿಕಿತ್ಸೆ ಪಡೆಯುವವರಿದ್ದಾರೆ.
( ದಟ್ಸ್ ಸಿನಿ ವಾರ್ತೆ)
ಯೋಗರಾಜ್ ಭಟ್ ಶೀಘ್ರವಾಗಿ ಗುಣಮುಖರಾಗಲೆಂದು ಶುಭ ಹಾರೈಸಿ .