Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಸ್ತು ಪುರುಷನಿಗೆ ದೊಡ್ಡ ಗಾಜನೂರಿನರಾಜ್ ಬಂಗಲೆ ಬಲಿ
ಬೆಂಗಳೂರು: ದೊಡ್ಡಗಾಜನೂರಿನಲ್ಲಿರುವ ವರನಟ ಡಾ. ರಾಜ್ಕುಮಾರ್ ಅವರ ತೋಟದ ಮನೆಯನ್ನು ಸಂಪೂರ್ಣ ಕೆಡವಿ ಹಾಕಲಾಗಿದೆ. ಕಾರಣ- ವಾಸ್ತು !
ರಾಜ್ಕುಮಾರ್ ಅವರ ಹುಟ್ಟೂರಾದ ಗಾಜನೂರಿನ ಈ ಮನೆಯನ್ನು ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಲಾಗಿಲ್ಲ. ಆದ್ದರಿಂದಲೇ ರಾಜ್ ಅಪಹರಣದಂತಹ ಅನಾಹುತಕಾರೀ ಘಟನೆ ಸಂಭವಿಸಿದೆ ಎಂದು ಜ್ಯೋತಿಷಿಗಳು ಹೇಳಿರುವುದರಿಂದ ಈ ಮನೆಯನ್ನು ಕೆಡವಿ ಹಾಕಲಾಗಿದೆ ಎಂದು ಸನ್ ಟೀವಿ ಮಂಗಳವಾರ (ಜುಲೈ 23) ವರದಿ ಮಾಡಿದೆ.
ಬಂಗಲೆಯಂತಿದ್ದ ಬೃಹತ್ ಮನೆಯನ್ನು ನೆಲಸಮ ಮಾಡಲಾಗಿದೆ. ಬದಲಿಯಾಗಿ ಆ ಮನೆಯ ಮುಂಭಾಗದಲ್ಲಿ ಇನ್ನೊಂದು ಬೃಹತ್ಬಂಗಲೆಯನ್ನು ವಾಸ್ತುಶಾಸ್ತ್ರದ ಪ್ರಕಾರ ಕಟ್ಟಲಾಗಿದೆ. ಆದರೆ ಕೆಡವಲಾದ ಮನೆಯ ಜಾಗವನ್ನು ಮುಂದೆ ಹೇಗೆ ಬಳಸಿಕೊಳ್ಳುವುದು ಎಂಬ ಬಗ್ಗೆ ರಾಜ್ಕುಟುಂಬ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿದು ಬಂದಿದೆ.
ಎರಡು ವರ್ಷಗಳ ಹಿಂದೆ ನರಹಂತಕ ವೀರಪ್ಪನ್, ಡಾ. ರಾಜ್ಕುಮಾರ್ ಅವರನ್ನು ಅವರ ಗಾಜನೂರಿನ ಮನೆಯಿಂದ ಅಪಹರಿಸಿಕೊಂಡು ಹೋಗಿದ್ದ. ಆ ಘಟನೆಯ ನಂತರ ರಾಜ್ಕುಮಾರ್ ತಮ್ಮ ಹುಟ್ಟೂರಿನ ಮನೆಗೆ ಮತ್ತೆ ಭೇಟಿ ನೀಡಿಲ್ಲ.
(ಇನ್ಫೋ ವಾರ್ತೆ)ಹಿನ್ನೋಟ