Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೀನಾ, ನಾಯಿ ನೆರಳು ಮತ್ತು ತನನಂ ತನನಂಗೆ ಮನ್ನಣೆ
ಗೋವಾದಲ್ಲಿ ನಡೆಯಲಿರುವ 37ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಸಲ ‘ಬಂಗಾರದ ಮನುಷ್ಯ’ ನ.25ರಂದು ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ಚಿತ್ರಕತೆ ಪ್ರಶಸ್ತಿಗೆ ‘ಹಸೀನಾ’ ಚಿತ್ರ ಪಾತ್ರವಾಗಿದೆ. ಬೆಲ್ಜಿಯಂನ ಬ್ರುಸೆಲ್ಸ್ನಲ್ಲಿ ನಡೆಯಲಿರುವ 33ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಎರಡು ಪ್ರಶಸ್ತಿಗಳನ್ನು ಹಸೀನಾ ಪಡೆದುಕೊಂಡಿದೆ.
ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಈ ಪ್ರಶಸ್ತಿಗಳ ಮೂಲಕ ಇನ್ನೆರಡು ಗರಿ ಮೂಡಿವೆ. ಬರ್ಲಿನ್ನಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಸೇರಿದಂತೆ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಚಿತ್ರ ಬಾಚಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ತಾರಾ ಶ್ರೇಷ್ಠ ನಟಿ ರಾಷ್ಟ್ರ ಪ್ರಶಸ್ತಿಯನ್ನು ಈ ಹಿಂದೆ ಪಡೆದಿದ್ದಾರೆ.
ನಮ್ಮ ಚಿತ್ರಗಳು : ಗೋವಾದಲ್ಲಿ ನಡೆಯಲಿರುವ 37ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಸಲ ‘ಬಂಗಾರದ ಮನುಷ್ಯ’ ನ.25ರಂದು ಪ್ರದರ್ಶನಗೊಳ್ಳಲಿದೆ. ಚಿತ್ರೋತ್ಸವದಲ್ಲಿ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತದೆ.
ಗಿರೀಶ್ ಕಾಸರವಳ್ಳಿ ನಿರ್ದೇಶನದ ಮತ್ತೊಂದು ಚಿತ್ರ‘ನಾಯಿ ನೆರಳು’ ಮತ್ತು ಕವಿತಾ ಲಂಕೇಶ್ ನಿರ್ದೇಶನದ ‘ತನನಂ ತನನಂ’ ಚಿತ್ರಗಳು ಪನೋರಮಾ ಮತ್ತು ವಾಣಿಜ್ಯ ಚಿತ್ರಗಳ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.
(ಏಜನ್ಸೀಸ್)