Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿ. ಶೇಷಾದ್ರಿಗೆ ಸತತ ಐದನೇ ರಾಷ್ಟ್ರ ಪ್ರಶಸ್ತಿ
ಮುನ್ನುಡಿ ಮೂಲಕ ನಿರ್ದೇಶಕರಾಗಿ ಕಾಣಿಸಿಕೊಂಡ ಶೇಷಾದ್ರಿ, 2001ರಲ್ಲಿ ಅವರು ಪ್ರಥಮ ಪ್ರಶಸ್ತಿ ಗಳಿಸಿದ್ದರು. ಅದಾದ ನಂತರ ಶೇಷಾದ್ರಿ ನಿರ್ದೇಶಿಸಿದ ಅತಿಥಿ (2002), ಬೇರು (2004) ಮತ್ತು ತುತ್ತೂರಿ (2007) ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಲಭ್ಯವಾಗಿತ್ತು. ಈಗ ಶೇಷಾದ್ರಿ ಮುಕುಟಕ್ಕೆ ವಿಮುಕ್ತಿ ಮೂಲಕ ಪ್ರಶಸ್ತಿಯ ಐದನೇ ಗರಿ ಸೇರಿಕೊಂಡಿದೆ.
ಜೀವನದ ಬಗ್ಗೆ ವಿಭಿನ್ನ ನೋಟ ಹೊಂದಿರುವ ಶೇಷಾದ್ರಿ, ತಮ್ಮ ಚಲನಚಿತ್ರಗಳಿಗೆ ಸದಾ ವಿಭಿನ್ನ-ಸೂಕ್ಷ್ಮ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡು ನೆರಳು-ಬೆಳಕಿನ ಮೂಲಕ ಆಟ ಆಡುವುದರಲ್ಲಿ ಸಿದ್ಧಹಸ್ತರು. ವಿಮುಕ್ತಿ ಕೂಡ ಅದಕ್ಕೆ ಹೊರತಾದ ಚಿತ್ರವಲ್ಲ. ಜಗದ್ವಿಖ್ಯಾತ ಮನೋವಿಶ್ಲೇಷಕ ಸಿಗ್ಮಂಡ್ ಫ್ರಾಯ್ಡ್ ಹೆಸರಿಟ್ಟ ಎಲೆಕ್ಟ್ರೊ ಕಾಂಪ್ಲೆಕ್ಸ್ ಎಂಬ ಮನೋವೈಜ್ಞಾನಿಕ ತುಮುಲವನ್ನು ಆಧರಿಸಿದ ಚಿತ್ರಕಥೆ ವಿಮುಕ್ತಿಯದ್ದು. ತಾಯಿಯ ಪ್ರೀತಿಯಿಂದ ವಂಚಿದಳಾದ ಮಹಿಳೆಯೊಬ್ಬಳು, ತಂದೆಯ ಮೇಲೆ ಅತಿಯಾದ ವ್ಯಾಮೋಹ ಇಟ್ಟುಕೊಂಡಿರುವ ಮಾನಸಿಕ ಅಸ್ಥಿಮಿತವೇ ಎಲೆಕ್ಟ್ರೋ ಕಾಂಪ್ಲೆಕ್ಸ್.
ಪ್ರಖ್ಯಾತ ಕಲಾವಿದ ಕೇಶವ ರಾವ್ ಅವರ ಪುತ್ರಿ ಮಾಧವಿ ಈ ಚಲನಚಿತ್ರದ ನಾಯಕಿ. ಬಾಲ್ಯದಲ್ಲಿ ತಾಯಿಯ ಪ್ರೀತಿಯಿಂದ ವಂಚಿತಳಾಗಿರುವ ಆಕೆ, ತಂದೆಯ ಪ್ರೀತಿಯಾಸರೆಯಡಿಯಲ್ಲಿಯೇ ಬೆಳೆದು ನಿಲ್ಲುತ್ತಾಳೆ. ಮದುವೆಯ ನಂತರ ಕೂಡ ತಂದೆಯ ಮೇಲೆ ಅತಿಯಾದ ವ್ಯಾಮೋಹ ಮುಂದುವರಿದ ಪರಿಣಾಮ, ಆಕೆಯ ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡುವ ಸಾಧ್ಯತೆಗಳು ಒಡಮೂಡುತ್ತವೆ. ಅದನ್ನು ಅರಿತ ಕೇಶವ ರಾವ್, ಮಗಳ ಜೀವನದಿಂದ ದೂರ ಸರಿಯುವ ನಿರ್ಧಾರಕ್ಕೆ ಬಂದು ಕಣ್ಮರೆಯಾಗಿ ಬಿಡುತ್ತಾರೆ.
ಹಲವಾರು ವರ್ಷಗಳ ಬಳಿಕ ಪತ್ರಿಕೆಯೊಂದರಲ್ಲಿ ಬಂದ ಲೇಖನವೊಂದರ ಮೂಲಕ ಆಕಸ್ಮಿಕವಾಗಿ ತಂದೆ ಕಾಶಿಯಲ್ಲಿ ಇರುವ ಅಂಶ ಆಕೆಯ ಅರಿವಿಗೆ ಬರುತ್ತದೆ. ತಂದೆಯನ್ನು ಹುಡುಕುತ್ತಾ ವಾರಣಾಸಿಗೆ ಸಾಗುವ ಆಕೆ, ಹುಡುಕಾಟದ ನಡುವೆಯೇ ಅಲ್ಲಿನ ವಿಚಿತ್ರ- ವಾಸ್ತವ ಲೋಕಕ್ಕೆ ತೆರೆದುಕೊಳ್ಳುತ್ತಾಳೆ. ಆ ಮೂಲಕ ತನ್ನನ್ನು ತಾನೇ ಹುಡುಕುತ್ತಾ ಸಾಗುವ ಆಕೆ ಬದುಕಿಗೆ ಬೇರೊಂದು ಅರ್ಥ ಕಂಡುಕೊಳ್ಳುವ ಮನೋಜ್ಞವಾದ ಚಿತ್ರವೇ ವಿಮುಕ್ತಿ. ಅತ್ಯಂತ ಕ್ಲಿಷ್ಟ ಚಿತ್ರಕಥೆ ಹೊಂದಿರುವ ವಿಮುಕ್ತಿಯನ್ನು ಸಿನಿಮಾ ಮಾಧ್ಯಮದಲ್ಲಿ ಒಂದು ಯಶಸ್ವಿ ಪ್ರಯೋಗವಾಗಿಸಿದವರು ಶೇಷಾದ್ರಿ. ಅವರ ಆ ಪ್ರಯತ್ನಕ್ಕೆ ಈಗ ರಾಷ್ಟ್ರ ಪ್ರಶಸ್ತಿಯ ಮೂಲಕ ಫಲ ದೊರಕಿದೆ.