Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪಾಜಿ ಆಶಯದ ವಿರುದ್ಧ ಹೋದರೆ ಸುಮ್ಮನಿರಲ್ಲ
ಹೀಗೆಂದು ನಟ ಶಿವರಾಜ್ ಕುಮಾರ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಅಣ್ಣಾವ್ರ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ನೆರೆದಿದ್ದ ಅಸಂಖ್ಯಾತ ಅಭಿಮಾನಿಗಳ ಮುಂದೆ ಹೀಗೆ ಗುಡುಗಿರುವ ಶಿವಣ್ಣರ ಮಾತಿನ ಹಿಂದಿರುವ ವಿಷಯ ಡಬ್ಬಿಂಗ್ ವಿರೋಧ. ಇದಕ್ಕೆ ಕಾರಣ, ಬಾಲಿವುಡ್ ನಟ, ನಿರ್ಮಾಪಕ ಹಾಗೂ ನಿರ್ದೇಶಕ ಅಮೀರ್ ಖಾನ್ ನಡೆಸಲಿರುವ ಸತ್ಯಮೇವ ಜಯತೇ' ಎಂಬ ಕಿರುತೆರೆ ಕಾರ್ಯಕ್ರಮ.
ಇದೇ ಪ್ರಪ್ರಥಮ ಬಾರಿಗೆ ಕಿರುತೆರೆಗೆ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದಾರೆ ಬಾಲಿವುಡ್ ನಟ ಅಮೀರ್ ಖಾನ್. ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಅಮೀರ್ ನಡೆಸಿಕೊಡುವ 'ಸತ್ಯಮೇವ ಜಯತೆ' ಕಾರ್ಯಕ್ರಮ ಮೇ 6ರಿಂದ ಆರಂಭವಾಗಲಿದೆ. ಈ ಕಾರ್ಯಕ್ರಮ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಹೀಗೆ ಭಾರತದ ನಾಲ್ಕು ಭಾಷೆಗಳಲ್ಲಿ ಪ್ರಸಾರವಾಗಲಿದೆ. ಕನ್ನಡಿಗರು ಸಹಕರಿಸಿದರೆ ಕನ್ನಡಕ್ಕೂ ಡಬ್ ಮಾಡಲು ಅಮೀರ್ ಉದ್ದೇಶಿಸಿದ್ದರು. ಆದರೆ ಇಲ್ಲಿ ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಆ ಕಾರ್ಯಕ್ರಮ ಕನ್ನಡಕ್ಕೂ ಡಬ್ ಆಗುವಂತೆ ಕನ್ನಡದ ಚಿತ್ರೋದ್ಯಮದಲ್ಲಿ ತೆರೆಮರೆಯಲ್ಲಿ ಚಟುವಟಿಕೆ ಆರಂಭವಾಗಿದೆ. ಈಗಾಗಲೇ ಹಿಂಬಾಗಿಲಿನಿಂದ ಪ್ರವೇಶ ಪಡೆಯಲು ಪ್ರಯತ್ನ ನಡೆಯುತ್ತಿವೆ ಎಂಬ ವರದಿ ಎಲ್ಲೆಡೆ ಓಡಾಡುತ್ತಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿರುವ ಶಿವಣ್ಣ, "ಅಪ್ಪಾಜಿ ಡಬ್ಬಿಂಗ್ ವಿರೋಧಿಯಾಗಿದ್ದರು. ಅವರ ಆಶಯಕ್ಕೆ ವಿರುದ್ಧವಾಗಿ ಯಾರೇ ನಡೆದುಕೊಂಡರೂ ಸುಮ್ಮನಿರುವುದಿಲ್ಲ" ಎಂದು ಸಿಂಹದ ಮರಿಯಂತೆ ಆರ್ಭಟಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)