twitter
    For Quick Alerts
    ALLOW NOTIFICATIONS  
    For Daily Alerts

    ಅಪ್ಪಾಜಿ ಆಶಯದ ವಿರುದ್ಧ ಹೋದರೆ ಸುಮ್ಮನಿರಲ್ಲ

    |

    Shivrajkumar
    "ಇದೇ ರೀತಿ ಇನ್ನೂ ಮುಂದುವರಿದರೆ ಚೆನ್ನಾಗಿರುವುದಿಲ್ಲ. ಅಪ್ಪಾಜಿ ಆಶಯಕ್ಕೆ ವಿರುದ್ಧವಾಗಿ ಹೋದರೆ ಸುಮ್ಮನಿರಲ್ಲ. ಎಲ್ಲಾ ಭಾಷೆ, ಎಲ್ಲಾ ನಟರ ಚಿತ್ರಗಳ ಮೇಲೆ ನಮಗೆ ಅಭಿಮಾನವಿದೆ. ಆದರೆ ಇತ್ತೀಚಿಗೆ ಚಿತ್ರೋದ್ಯಮದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತೀವ್ರ ಅಸಮಾಧಾನವಾಗಿದೆ. ಅಪ್ಪಾಜಿಯ ಮೇಲೆ ಆಣೆ ಮಾಡುತ್ತೇನೆ, ನಾನು ಜೀವ ಹೋಗುವವರೆಗೂ ಹೋರಾಟಕ್ಕೆ ಸಿದ್ಧ. ನಾನು ಹೋದರೆ ತಮ್ಮ, ತಮ್ಮನ ಮಕ್ಕಳು ಇದ್ದಾರೆ. ನಾನು ಯಾರಿಗೂ ಕೇರ್ ಮಾಡೊಲ್ಲ"

    ಹೀಗೆಂದು ನಟ ಶಿವರಾಜ್ ಕುಮಾರ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಅಣ್ಣಾವ್ರ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ನೆರೆದಿದ್ದ ಅಸಂಖ್ಯಾತ ಅಭಿಮಾನಿಗಳ ಮುಂದೆ ಹೀಗೆ ಗುಡುಗಿರುವ ಶಿವಣ್ಣರ ಮಾತಿನ ಹಿಂದಿರುವ ವಿಷಯ ಡಬ್ಬಿಂಗ್ ವಿರೋಧ. ಇದಕ್ಕೆ ಕಾರಣ, ಬಾಲಿವುಡ್ ನಟ, ನಿರ್ಮಾಪಕ ಹಾಗೂ ನಿರ್ದೇಶಕ ಅಮೀರ್ ಖಾನ್ ನಡೆಸಲಿರುವ ಸತ್ಯಮೇವ ಜಯತೇ' ಎಂಬ ಕಿರುತೆರೆ ಕಾರ್ಯಕ್ರಮ.

    ಇದೇ ಪ್ರಪ್ರಥಮ ಬಾರಿಗೆ ಕಿರುತೆರೆಗೆ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದಾರೆ ಬಾಲಿವುಡ್ ನಟ ಅಮೀರ್ ಖಾನ್. ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಅಮೀರ್ ನಡೆಸಿಕೊಡುವ 'ಸತ್ಯಮೇವ ಜಯತೆ' ಕಾರ್ಯಕ್ರಮ ಮೇ 6ರಿಂದ ಆರಂಭವಾಗಲಿದೆ. ಈ ಕಾರ್ಯಕ್ರಮ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಹೀಗೆ ಭಾರತದ ನಾಲ್ಕು ಭಾಷೆಗಳಲ್ಲಿ ಪ್ರಸಾರವಾಗಲಿದೆ. ಕನ್ನಡಿಗರು ಸಹಕರಿಸಿದರೆ ಕನ್ನಡಕ್ಕೂ ಡಬ್ ಮಾಡಲು ಅಮೀರ್ ಉದ್ದೇಶಿಸಿದ್ದರು. ಆದರೆ ಇಲ್ಲಿ ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

    ಆ ಕಾರ್ಯಕ್ರಮ ಕನ್ನಡಕ್ಕೂ ಡಬ್ ಆಗುವಂತೆ ಕನ್ನಡದ ಚಿತ್ರೋದ್ಯಮದಲ್ಲಿ ತೆರೆಮರೆಯಲ್ಲಿ ಚಟುವಟಿಕೆ ಆರಂಭವಾಗಿದೆ. ಈಗಾಗಲೇ ಹಿಂಬಾಗಿಲಿನಿಂದ ಪ್ರವೇಶ ಪಡೆಯಲು ಪ್ರಯತ್ನ ನಡೆಯುತ್ತಿವೆ ಎಂಬ ವರದಿ ಎಲ್ಲೆಡೆ ಓಡಾಡುತ್ತಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿರುವ ಶಿವಣ್ಣ, "ಅಪ್ಪಾಜಿ ಡಬ್ಬಿಂಗ್ ವಿರೋಧಿಯಾಗಿದ್ದರು. ಅವರ ಆಶಯಕ್ಕೆ ವಿರುದ್ಧವಾಗಿ ಯಾರೇ ನಡೆದುಕೊಂಡರೂ ಸುಮ್ಮನಿರುವುದಿಲ್ಲ" ಎಂದು ಸಿಂಹದ ಮರಿಯಂತೆ ಆರ್ಭಟಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)

    English summary
    Shivrajkumar told that he is dead against for Dubbing and will fight against till his end. He told it on the venue of Dr Rajkumar's 84th Birthday Celebration. 
 
    Wednesday, April 25, 2012, 13:31
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X