Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮರಳಿ ಕನ್ನಡ ಗೂಡಿಗೆ
ತಮಿಳು ಚಿತ್ರರಂಗಕ್ಕೆ ವಲಸೆ ಹೋಗಿದ್ದ ನಟ ಅರ್ಜುನ್ ಸರ್ಜಾ ಮರಳಿ ಗೂಡಿಗೆ ವಾಪಸಾಗಿದ್ದಾರೆ. ಅವರನ್ನು ಮತ್ತೆ ವಾಪಾಸು ಕರೆಸಿಕೊಂಡವರು ನೈಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಖೇಣಿ. ಅವರು ನಿರ್ಮಿಸಲಿರುವ ಹೊಸ ಚಿತ್ರಕ್ಕೆ 'ಪ್ರಸಾದ್' ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರದ ನಾಯಕ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ.
ಈ ಹಿಂದೆ ಅರ್ಜುನ್ ಸರ್ಜಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ 'ಕಾಂಟ್ರಾಕ್ಟ್' ಚಿತ್ರವನ್ನು ಒಪ್ಪಿಕೊಂಡಿದ್ದರು. ಚಿರಂಜೀವಿ ಸರ್ಜಾ ಅಭಿನಯದ 'ವಾಯುಪುತ್ರ' ಚಿತ್ರದಲ್ಲಿ ಅರ್ಜುನ್ ಸರ್ಜಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೂ ಮುನ್ನ 'ಶ್ರೀ ಮಂಜುನಾಥ' ಚಿತ್ರದಲ್ಲಿ ಅರ್ಜುನ್ ಅಭಿನಯಿಸಿದ್ದರು.
ಮನೋಜ್ ಎಂಬುವವರು ಪ್ರಸಾದ್ ಚಿತ್ರಕ್ಕೆಆಕ್ಷನ್, ಕಟ್ ಹೇಳಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಯುಗಾದಿ ಹೊತ್ತಿಗೆ ಈ ಚಿತ್ರ ಸೆಟ್ಟೇರಲಿದೆಯಂತೆ. ಅಂದಹಾಗೆ ಶ್ರೀಮಂಜುನಾಥ ನಂತರ ಮತ್ತೆ ದ್ವಿಭಾಷಾ ಚಿತ್ರ ಸೂತ್ರ ಹಿಡಿದುಕೊಂಡು ಬಂದಿದ್ದ ಅರ್ಜುನ್ ಸರ್ಜಾಈಗ ಮತ್ತೊಮ್ಮೆ ಕನ್ನಡದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.