Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಸರ್ಗದ ಮಡಿಲಲ್ಲಿ ಚಿರಂಜೀವಿ, ಕೃತಿ ಡ್ಯುಯಟ್
ಸದಾ ಹಚ್ಚಹಸಿರಿನಿಂದ ಕಂಗೊಳಿಸುವ, ನಿಸರ್ಗ ಮಾತೆಯ ತವರುಮನೆಯಂತಿರುವ ಸಕಲೇಶಪುರದಲ್ಲಿ ಮಾರ್ಸ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಚಿರು' ಚಿತ್ರದ ಹಾಡೊಂದು ಚಿತ್ರೀಕರಣಗೊಂಡಿದೆ. ಮಹೇಶ್ಬಾಬು ರಚಿಸಿರುವ 'ಒಲವನ್ನು ಹೇಳು ಬಾರೋ ಒಲವನ್ನು ಸೇರು ಬಾರೋ' ಎಂಬ ಗೀತೆಯ ಚಿತ್ರೀಕರಣದಲ್ಲಿ ಚಿರಂಜೀವಿಸರ್ಜಾ ಹಾಗೂ ಕೃತಿ ಪಾಲ್ಗೊಂಡಿದ್ದರು. ಹರ್ಷ ಈ ಗೀತೆ ನೃತ್ಯ ಸಂಯೋಜಿಸಿದ್ದಾರೆ.
ಈ ಹಾಡನ್ನು ರಚಿಸುವ ಮೂಲಕ ನಿರ್ದೇಶಕ ಮಹೇಶ್ಬಾಬು ಗೀತರಚನೆಕಾರರಾಗೂ ಪರಿಚಿತರಾಗುತ್ತಿದ್ದಾರೆ. ಚಿತ್ರಕ್ಕೆ ಮೂರು ಹಾಡಿನ ಚಿತ್ರೀಕರಣ ಹಾಗೂ ರೈಲಿನಲ್ಲಿ ನಡೆಯಬೇಕಾಗಿರುವ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಉಳಿದ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ ಎನ್ನುತ್ತಾರೆ ಚಿತ್ರದ ನಿರ್ದೆಶಕರಾದ ಮಹೇಶ್ಬಾಬು.
ಸುರೇಶ್ಜೈನ್ ನಿರ್ಮಿಸುತ್ತಿರುವ 'ಚಿರು' ಚಿತ್ರಕ್ಕೆ ನಿರ್ದೇಶಕರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸ್ವಾಮೀಜಿ ಕಥೆ, ಸುಂದರನಾಥಸುವರ್ಣ ಛಾಯಾಗ್ರಹಣ, ಗಿರಿಧರ್ ಸಂಗೀತ, ಶ್ರೀ(ಕ್ರೇಜಿಮೈಂಡ್ಸ್) ಸಂಕಲನ, ರವಿವರ್ಮ ಸಾಹಸ, ಮುರುಳಿ, ಹರ್ಷ ನೃತ್ಯ ಸಂಯೋಜನೆಯಿದೆ. 'ಚಿರು' ಚಿತ್ರದ ತಾರಾಬಳಗದಲ್ಲಿ ಚಿರಂಜೀವಿಸರ್ಜಾ, ಕೃತಿ, ರಂಗಾಯಣರಘು, ಪದ್ಮಾವಾಸಂತಿ, ಬುಲೆಟ್ಪ್ರಕಾಶ್, ಕಿರಣ್(ಹಾಗೆಸುಮ್ಮನೆ), ಪಿ.ಎನ್.ಸತ್ಯ, ನರಸಿಂಹಜೋಶಿ ಮುಂತಾದವರಿದ್ದಾರೆ.