Just In
Don't Miss!
- News
ಮುಡಾ ನಿವೇಶನಗಳ ಅಭಿವೃದ್ಧಿಗೆ ಒನ್ ಟೈಂ ಸೆಟ್ಲಮೆಂಟ್
- Automobiles
ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್ಎಲ್5 ಕಾರು
- Sports
ನೇಥನ್ ಲಿಯಾನ್ಗೆ ಅವಿಸ್ಮರಣೀಯ ಉಡುಗೊರೆ ಕೊಟ್ಟ ಅಜಿಂಕ್ಯ ರಹಾನೆ
- Lifestyle
ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆ!!!
- Finance
ಷೇರುಪೇಟೆಯಲ್ಲಿ ಉತ್ಸಾಹ; ಹೂಡಿಕೆದಾರರ ಸಂಪತ್ತು 3.50 ಲಕ್ಷ ಕೋಟಿ ರು. ಹೆಚ್ಚಳ
- Education
NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಾ. ರಾಜ್ ಕುಮಾರ್ ಪ್ರಶಸ್ತಿ ಪಡೆದವರೇ ಧನ್ಯ
ಒಂದು ಲಕ್ಷ ರೂ. ನಗದನ್ನು ಹೊಂದಿರುವ ಪ್ರಶಸ್ತಿಯನ್ನು ಚಿತ್ರರಂಗ ಮೂವರು ಹಿರಿಯ ಕಲಾವಿದರಿಗೆ ನೀಡಿ ರಾಜ್ ಕುಟುಂಬ ತುಂಬಾ ಆತ್ಮೀಯವಾಗಿ ಸನ್ಮಾನಿಸಿದರು. ಕನ್ನಡದ ವರನಟ ಡಾ.ರಾಜ್ಕುಮಾರ್ರ ಹೆಸರಿನಲ್ಲಿ ಪ್ರತಿವರ್ಷ ಕೊಡಮಾಡುವ 'ಡಾ.ರಾಜ್ ಸೌಹಾರ್ದ ಪ್ರಶಸ್ತಿ"ಯನ್ನು ಈ ಬಾರಿ ಕನ್ನಡ ಸಿನಿಮಾದ ಹಿರಿಯ ನಟ ಶನಿಮಹದೇವಪ್ಪ, ಬೆಂಗಳೂರು ನಾಗೇಶ್ ಮತ್ತು ಹಿರಿಯ ನೃತ್ಯ ನಿರ್ದೇಶಕಿ ದೇವಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.
ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ಮತ್ತು ಪುನಿತ್ ರಾಜ್ಕುಮಾರ್ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ ವರ್ಷ ಡಾ. ರಾಜ್ ಸೌಹಾರ್ದ ಪ್ರಶಸ್ತಿಯನ್ನು ಎಸ್ ಕೆ ಭಗವಾನ್ ಹಾಗೂ ಶಾಂತಮ್ಮ ಅವರಿಗೆ ನೀಡಿ ಗೌರವಿಸಲಾಗಿತ್ತು.
ಅಪ್ಪಾಜಿಯವರ ಜನ್ಮದಿನವಾಗಿದ್ದು, ಮೂರು ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಹರ್ಷದ ಸಂಗತಿ. ಕಳೆದ ಎರಡು ವರ್ಷಗಳಿಂದ ನಮ್ಮ ಕುಟುಂಬ ಮೂವರು ಕಲಾವಿದರಿಗೆ ಡಾ.ರಾಜ್ ಸೌಹಾರ್ದ ಪ್ರಶಸ್ತಿ ನೀಡುತ್ತಿದೆ ಎಂದರು. ರಾಜ್ರ ಹಿರಿಯ ಪುತ್ರ ಶಿವರಾಜ್ ಕುಮಾರ್ ಮಾತನಾಡಿ, ಚಲನ ಚಿತ್ರರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಅಪ್ಪಾಜಿಯ ಹೆಸರಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಅಪ್ಪಾಜಿ ಯಾವಾಗಲೂ ಹಿರಿಯ ಕಲಾವಿದರನ್ನು ತುಂಬ ಗೌರವದಿಂದ ಕಾಣುತ್ತಿದ್ದರು ಎಂದರು.