Don't Miss!
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'2012' ಚಿತ್ರ ವೀಕ್ಷಿಸಿದ ಸಚಿವ ಶ್ರೀರಾಮುಲು
ಆರೋಗ್ಯ ಸಚಿವ ಶ್ರೀರಾಮುಲು ಅವರ ಸಿನಿಮಾ ಶೋಕಿ ಮತ್ತೊಮ್ಮೆ ಸಾಬೀತಾಗಿದೆ. ಮಂಗಳವಾರ ಶ್ರೀರಾಮುಲು ಸೀದಾ ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರಕ್ಕೆ ಬಂದು ಹಾಲಿವುಡ್ ಚಿತ್ರ 2012ನ್ನು ವೀಕ್ಷಿಸಿ ಸಂಭ್ರಮಿಸಿದರು. ಆರೋಗ್ಯ ಸಚಿವರು ತಡವಾಗಿ ಬಂದ ಕಾರಣ ಪ್ರದರ್ಶನ ಸಹ ಅರ್ಧಗಂಟೆ ತಡವಾಗಿ ಆರಂಭವಾಯಿತು!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಗದಗ ಜಿಲ್ಲೆಯ ನವಲಗುಂದದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀರಾಮುಲು ಅಲ್ಲಿಂದ ಸೀದಾ ಹುಬ್ಬಳ್ಳಿಗೆ ಬಂದರು. ಅವರು ಬರುವ ಹಿನ್ನೆಲೆಯಲ್ಲಿ ಅಪ್ಸರಾ ಚಿತ್ರಮಂದಿರಕ್ಕೆ ಪೊಲೀಸರ ಬಿಗಿ ಬಂದೋಬಸ್ತ್ ಸಹ ಒದಗಿಸಲಾಗಿತ್ತು. ಸಿನಿಮಾ ಮುಗಿಯುವುದಕ್ಕೂ 10 ನಿಮಿಷಗಳ ಮುನ್ನ ಚಿತ್ರಮಂದಿರದಿಂದ ಶ್ರೀರಾಮುಲು ಹೊರನಡೆದರು.
ಆದರೆ ಸಚಿವರು ಮಾಧ್ಯಮಗಳ ಕಣ್ತಪ್ಪಿಸಲು ಸಾಧ್ಯವಾಗಲಿಲ್ಲ. ಸಿನಿಮಾ ಹೇಗಿತ್ತು? ಎಂದು ಕೇಳಿದ ಮಾಧ್ಯಮ ಪ್ರತಿನಿಧಿಗಳಿಗೆ ಸಚಿವರ ಉತ್ತರಿಸಲಿಲ್ಲ. ಯಾವ ಪ್ರಶ್ನೆಗೂ ತುಟಿ ಬಿಚ್ಚದೆ ಶ್ರೀರಾಮುಲು ಹೊರಟೇ ಹೋದರು. ಈ ಹಿಂದೆಯೂ ನೆರೆ ಹಾವಳಿ ಸಮಸ್ಯೆಗಳನ್ನು ಮರೆತು ಗದಗ್ ನ ಶ್ರೀಕೃಷ್ಣ ಚಿತ್ರಮಂದಿರದಲ್ಲಿ ಮನಸಾರೆ ಚಿತ್ರ ವನ್ನು ಶ್ರೀರಾಮುಲು ನೋಡಿ ಆನಂದಿಸಿದ್ದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಕ್ಕಿದೆ. ಕಿಮ್ಸ್ ಆಸ್ಪತ್ರೆಯ ಕರ್ಮಕಾಂಡ ಹೇಳತೀರದು. ಆರೋಗ್ಯ ಸಚಿವರು ಅಲ್ಲಿಗೆ ಅನಿರೀಕ್ಷಿತ ಭೇಟಿ ಕೊಟ್ಟಿದ್ದರೆ ಪರಿಸ್ಥಿತಿ ಸುಧಾರಿಸುತ್ತಿತ್ತು ಎಂದು ಹುಬ್ಬಳ್ಳಿ ಜನ ಶ್ರೀರಾಮುಲು ಬಗ್ಗೆ ಬೇಸರಿಕೊಂಡಿದ್ದಾರೆ. ಆದರೆ ಶ್ರೀರಾಮುಲು ಮಾತ್ರ ಇದ್ಯಾವುದನ್ನೂ ತಲೆಗೆ ಹಚ್ಚಿಕೊಂಡಿಲ್ಲ.
(ದಟ್ಸ್ ಕನ್ನಡ ಚಿತ್ರವಾರ್ತೆ)