Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳೂರು ಕ್ರಾಸ್ ಬಳಿ ಜಗ್ಗೇಶ್ ಜೊತೆ ಡೈಸಿ ಡಂಕಣಕ್ಕ
ಹಸಿರು ತೋರಣಗಳಿಂದ ಕಂಗೊಳ್ಳಿಸುತ್ತಿದ್ದ ರಸ್ತೆಗಳು. ಮನೆಯ ಮುಂದೆ ಆಕರ್ಷಕ ರಂಗೋಲಿಯ ಚಿತ್ತಾರ. ಕಣ್ಣಾಡಿಸಿದಷ್ಟು ಜನಸಾಗರ. ಡೊಳ್ಳು ಕುಣಿತ ಹಾಗೂ ವೀರಗಾಸೆಯವರ ನರ್ತನ. ಅಲ್ಲಿ ಊರಹಬ್ಬದ ಸಡಗರ.
ಈ ಸಂಭ್ರಮದ ನಡುವೆ ಶಿವಲಿಂಗಪ್ಪ ಅರ್ಪಿಸುವ, ಗುರುರಾಜ ಫಿಲಂಸ್ ಲಾಂಛನದಲ್ಲಿ ಪರಿಮಳಾಜಗ್ಗೇಶ್ ಹಾಗೂ ಜಗ್ಗೇಶ್ ಅವರು ನಿರ್ಮಿಸುತ್ತಿರುವ 'ಬಾಡಿಗಾರ್ಡ್' ಚಿತ್ರಕ್ಕಾಗಿ ವಿ.ಮನೋಹರ್ ಬರೆದಿರುವ "ನಂಬಿದವರ ಮನೆಯ ಬಳಿಗೆ ತುಂಬಿ ತುಳುಕಾಡು ಬಾಪ್ಪ ಸಿದ್ದಯ್ಯಸ್ವಾಮಿ ಬನ್ನಿ" ಎಂದು ಆರಂಭವಾಗುವ ಗೀತೆಯ ಚಿತ್ರೀಕರಣ.
ಜಗ್ಗೇಶ್, ಗುರುದತ್, ಜಯಶ್ರೀ, ಜೀವನ್, ಡೈಸಿ ಶಾ, ಬ್ಯಾಂಕ್ ಜನಾರ್ದನ್ ಹಾಗೂ ಅರವತ್ತಕ್ಕೂ ಅಧಿಕ ನೃತ್ಯಗಾರರು ಅಭಿನಯಿಸಿದ ಈ ಹಾಡಿನ ಚಿತ್ರೀಕರಣ ಬೆಳ್ಳೂರು ಕ್ರಾಸ್ ಬಳಿಯ ಆದಿಚುಂಚನಗಿರಿಯಲ್ಲಿ ನಡೆಯಿತು. ತ್ರಿಭುವನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದರು.
ಅಶೋಕ್ವಿರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿನಯ್ಚಂದ್ರ ಸಂಗೀತ ನೀಡಿದ್ದಾರೆ. ರಾಜೇಂದ್ರ ಕಾರಂತ್ ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿರುವ 'ಬಾಡಿಗಾರ್ಡ್' ಹಾಡುಗಳನ್ನು ಕವಿರಾಜ್, ರಾಂನಾರಾಯಣ್, ವಿ.ಮನೋಹರ್ ಬರೆದಿದ್ದಾರೆ. ಜಗ್ಗೇಶ್, ಡೈಸಿ ಶಾ, ಸ್ಪೂರ್ತಿ, ಸಾಧುಕೋಕಿಲಾ, ಬ್ಯಾಂಕ್ ಜನಾರ್ದನ್, ಗುರುದತ್, ಜಯಶ್ರೀ, ಜೀವನ್, ಅಲಿ, ವಿನಯ್ಚಂದ್ರ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)