Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಮಾಜಿ ಡಾನ್ ಜೇಡರಹಳ್ಳಿ ಕೃಷ್ಣಪ್ಪ ಎಂಟ್ರಿ
ರೌಡಿಸಂಗೆ ಗುಡ್ ಬೈ ಹೇಳಿ ಈಗ ಸಮಾಜ ಸೇವೆಯಲ್ಲಿ ಸಕ್ರಿಯವಾಗಿರುವ ಎಚ್ ಕೃಷ್ಣಮೂರ್ತಿ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪ(ಜೆಕೆ) ತಮ್ಮ ದಾದಾಗಿರಿಯ ದಿನಗಳನ್ನು ತೆರೆಗೆ ತರುತ್ತಿದ್ದಾರೆ. ಚಿತ್ರದ ಹೆಸರು 'ಜೇಡರಹಳ್ಳಿ'. ಅವರ ದಾದಾಗಿರಿ ದಿನಗಳನ್ನು ಕುರಿತ ಸತ್ಯ ಘಟನೆಗಳ ಆಧಾರಿತ ಚಿತ್ರವಿದು. ನಾಯಕ ನಟನ ಪಾತ್ರಕ್ಕೆ ದುನಿಯಾ ವಿಜಯ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಕಡೆಗೆ ತಾವೇ ನಾಯಕ ನಟರಾಗುತ್ತಿದ್ದಾರೆ ಜೆಕೆ.
ಇತ್ತೀಚೆಗೆ ತೆರೆಕಂಡ '5 ಈಡಿಯಟ್ಸ್' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಜೇಡರಲ್ಲಿ ಕೃಷ್ಣಪ್ಪ ಕಾಣಿಸಿದ್ದರು. ಹರ್ಷಿಕಾ ಪೂಣಚ್ಚ ತಂದೆಯಾಗಿ ಅಭಿನಯಿಸಿದ್ದ ಜೆಕೆ ದಾರಿತಪ್ಪಿದ ಹುಡುಗರನ್ನು ಸರಿದಾರಿಗೆ ತರುವ ಪಾತ್ರವನ್ನು ಪೋಷಿಸಿದ್ದರು. ಈಗ 'ಜೇಡರಳ್ಳಿ' ಚಿತ್ರ ಮಾರ್ಚ್ ತಿಂಗಳಲ್ಲಿ ಸೆಟ್ಟೇರಲಿದೆ. ಈ ಹಿಂದೆ ಉಪೇಂದ್ರ ನಿರ್ದೇಶನದ 'ಓಂ' ಚಿತ್ರದಲ್ಲಿ ಜೆಕೆ ರೌಡಿಯಾಗಿ ಕಾಣಿಸಿಕೊಂಡಿದ್ದರು.
ಗಾಂಧಿನಗರದ ಮೂಲಗಳ ಪ್ರಕಾರ, '5 ಈಡಿಯಟ್ಸ್' ಹಾಗೂ 'ಅಂಬಾರಿ' ಚಿತ್ರಗಳಿಗೆ ಕೆ ಎಂ ಕೃಷ್ಣಮೂರ್ತಿ ಎಂಬ ಹೆಸರಲ್ಲಿ ಜೆಕೆ ಫೈನಾನ್ಸ್ ಮಾಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಒಟ್ಟಿನಲ್ಲಿ ಈ ಚಿತ್ರದ ಮೂಲಕ ಜೆಕೆ ಪೂರ್ಣ ಪ್ರಮಾಣದ ನಾಯಕ ನಟನಾಗಿ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. 'ಗುಬ್ಬಿ' ಚಿತ್ರದ ನಿರ್ದೇಶಕ ವಿಜಯ್ ಆಕ್ಷನ್, ಕಟ್ನಲ್ಲಿ ಚಿತ್ರ ಮೂಡಿಬರಲಿದೆ.