Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರು ರಾಜ್ಯಗಳಲ್ಲಿ 'ಕೃಷ್ಣನ್ ಲವ್ ಸ್ಟೋರಿ'
ಶ್ರೀವೆಂಕಟೇಶ್ವರ ಕೃಪಾ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಹಾಗೂ ಮೋಹನ್ ಜಿ ನಾಯಕ್ ನಿರ್ಮಿಸುತ್ತಿರುವ 'ಕೃಷ್ಣನ್ ಲವ್ ಸ್ಟೋರಿ' ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಸಾಗರ, ಕುಮುಟಾ, ಮಿರ್ ಜಾನ್ ಫೋರ್ಟ್ ಹಾಗೂ ಉಡುಪಿಗಳಲ್ಲಿ ಚಿತ್ರೀಕರಣ ನಡೆಸುವ ಚಿತ್ರತಂಡ 14ದಿನಗಳ ಕಾಲ ಮಂಜಿನ ನಗರ ಮಡಿಕೇರಿಯಲ್ಲಿ ನೆಲೆಯೂರಲಿದೆ.
ಅಲ್ಲಿ ಅಜಯ್ ಹಾಗೂ ರಾಧಿಕಾ ಪಂಡಿತ್ ಅಭಿನಯದಲ್ಲಿ ಹಾಡು ಹಾಗೂ ಕೆಲವು ಭಾಗದ ಚಿತ್ರೀಕರಣ ನಡೆಯಲಿದ್ದು, ಅಲ್ಲಿಂದ ಶಿಂಷಾ ಮಾರ್ಗವಾಗಿ ಚಿತ್ರತಂಡ ಕೇರಳ ಮತ್ತು ತಮಿಳುನಾಡಿನ ಹೊಗೆನಕಲ್ ಜಲಪಾತದತ್ತ ತೆರಳಲಿದೆ ಎಂದು ತಿಳಿಸಿದ ನಿರ್ಮಾಪಕರು ನಮ್ಮ ಚಿತ್ರಕ್ಕೆ ದಕ್ಷಿಣದ ಮೂರು ರಾಜ್ಯಗಳಲ್ಲಿ ಚಿತ್ರೀಕರಣ ನಡೆಯಲಿದೆ ಎನ್ನುತ್ತಾರೆ.
'ಸಿಕ್ಸರ್' ಚಿತ್ರದ ಮೂಲಕ ನಿರ್ದೇಶಕರಾಗಿ, 'ಮೊಗ್ಗಿನ ಮನಸು' ಚಿತ್ರಕ್ಕೆ ಫಿಲಂ ಪೇರ್ ಪ್ರಶಸ್ತಿ ಪಡೆದು ಖ್ಯಾತರಾಗಿರುವ ಶಶಾಂಕ್ ಈ ಚಿತ್ರದ ನಿರ್ದೇಶಕರು. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಶ್ರೀಧರ್ ಸಂಗೀತವಿರುವ 'ಕೃಷ್ಣನ್ ಲವ್ ಸ್ಟೋರಿ'ಗೆ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ.
ಕೆ.ಎಂ.ಪ್ರಕಾಶ್ ಸಂಕಲನ, ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಹಾಗೂ ಶಶಾಂಕ್ ಗೀತರಚನೆ, ರವಿವರ್ಮ ಸಾಹಸ, ಮೋಹನ್ ಬಿ ಕೆರೆ ಕಲೆ ಚಂಪಕಧಾಮ ಬಾಬು ಮತ್ತು ಕುಮಾರ್ ನಿರ್ಮಾಣ ನಿರ್ವಹಣೆಯಿದೆ. ಈ ಚಿತ್ರದಲ್ಲಿ ಅಜಯ್- ರಾಧಿಕಾ ಪಂಡಿತ್ ನಾಯಕ/ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಯೋಗೀಶ್ ಹುಣಸೂರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಸಿ.ಎಚ್.ಸುರೇಶ್ ಹಾಗೂ ಸಿ.ಲೋಕೇಶ್ ಸಹ ನಿರ್ಮಾಪಕರಾಗಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)