Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಮನಸಾರೆ
ರಾಕ್ಲೈನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸಿರುವ 'ಮನಸಾರೆ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ 'ಮುಂಗಾರು ಮಳೆ' ಸುರಿಸಿ ಯಶಸ್ಸಿನ 'ಗಾಳಿಪಟ' ಹಾರಿಸಿದ ಯೋಗರಾಜ್ಭಟ್ ಈ ಪ್ರೇಮ ಕಥಾನಕವನ್ನು ನಿರ್ದೇಶಿಸಿದ್ದಾರೆ.
ಕರ್ನಾಟಕದ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿರುವ 'ಮನಸಾರೆ' ಚಿತ್ರವನ್ನು ಛಾಯಾಗ್ರಾಹಕ ಸತ್ಯ ಹೆಗ್ಡೆ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮಧುರ ಗೀತೆಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಧ್ವನಿಸುರುಳಿಗಳಿಗೆ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ಕೂಡ ನೋಡುಗರನ್ನು ರಂಜಿಸಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ನಿರ್ದೇಶಕರೇ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದರೆ, ಚಿತ್ರಕಥೆಯನ್ನೂ ಬಿ.ಪಿ.ಪವನಕುಮಾರ್ ರಚಿಸಿದ್ದಾರೆ. ಜೋನಿ ಹರ್ಷ ಸಂಕಲನ, ಶಶಿಧರ್ ಅಡಪ ಕಲೆ, ಕೌರವ ವೆಂಕಟೇಶ್ ಪಂಬಲ್ ರವಿ ಸಾಹಸ, ಹರ್ಷ ಮುರುಳಿ ನೃತ್ಯ ಹಾಗೂ ಸುರೇಶ್ ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ದಿಗಂತ್, ಅಂದ್ರಿತಾ ರೇ, ರಾಜು ತಾಳಿಕೋಟೆ, ಅಚ್ಯುತ್ ಕುಮಾರ್, ಅಶೋಕ್ರಾವ್, ರಾಕ್ಲೈನ್ ಪುಷ್ಪಕ್, ಪವನ್ಕುಮಾರ್, ಧನಲಕ್ಷ್ಮೀ, ಸತೀಶ್ ಇದ್ದಾರೆ. ನಟಿ ನೀತು ಸ್ನೇಹಪೂರ್ವಕವಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)