Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮೀಯ ರೀತಿಯಲಿ ಲಹರಿ ವೇಲು ಅಪಹರಣ
ಬುಧವಾರ ಸಂಜೆ ಅಂಬೇಡ್ಕರ್ ಭವನದಲ್ಲಿ ಈ ಟಿವಿ ಆಯೋಜಿಸಿದ್ದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವೇಲು ಭಾಗವಹಿಸಿದ್ದರು. ತುರ್ತು ಕೆಲಸದ ನಿಮಿತ್ತ ಅರ್ಧದಲ್ಲಿ ಸಮಾರಂಭದಿಂದ ಎದ್ದು ಹೊರಬಂದಿದ್ದಾರೆ. ಅವರು ಹೊರಬಂದ ಕೂಡಲೆ ಅಲ್ಲೇ ಇದ್ದ ಐದು ಮಂದಿಯ ತಂಡ ವೇಲು ಅವರ ಮೊಬೈಲ್ ಫೋನ್ ಕಿತ್ತುಕೊಂಡು ಅವರನ್ನು ಕಾರಿನಲ್ಲಿ ಅಪಹರಿಸಿದೆ.
ಸ್ವಲ್ಪ ಸಮಯದ ಬಳಿಕ ಎಸಿಪಿ ಅಶೋಕ್ ಅವರಿಂದ ವೇಲು ಅವರಿಗೆ ಕರೆ ಬಂದಿದೆ. ಕೂಡಲೆ ಜಾಗೃತರಾದ ಅಪಹರಣಕಾರರು ವೇಲು ಅವರನ್ನು ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಮಾರಕಾಸ್ತ್ರಗಳನ್ನು ಹೊಂದಿದ್ದ ಅವರನ್ನು ತಾವೆಲ್ಲಾ ಯಾರು ಎಂದು ವೇಲು ಪ್ರಶ್ನಿಸಿದಾಗ, "ಕಮ್ಮನಹಳ್ಳಿ ಬಿಜೆಪಿ ಕಾರ್ಪೊರೇಟರ್ ಗೋವಿಂದರಾಜು ಅವರ ತಮ್ಮ ಶ್ರೀನಿವಾಸರಾಜು ಕಡೆಯವರು" ಎಂದು ಹೇಳಿದ್ದಾಗಿ ವೇಲು ಅವರು ದಟ್ಸ್ಕನ್ನಡಕ್ಕೆ ತಿಳಿಸಿದರು.
ಈ ಟಿವಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ, ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಆಗಮಿಸಿದ್ದರು. ಬುಧವಾರ (ಮಾ.23) ಸಂಜೆ 7.30ರ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಲಹರಿ ವೇಲು ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯಾವ ಕಾರಣಕ್ಕೆ ಲಹರಿ ವೇಲು ಅವರನ್ನು ಅಪಹರಿಸಲಾಗಿತ್ತು ಎಂಬುದು ಇನ್ನೂ ಖಚಿತವಾಗಿಲ್ಲ.