Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತಿಭಾವಂತ ಹರೀಶ್ ರಾಜ್ 'ಕಲಾಕರ್ 'ತೆರೆಗೆ
ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿ ಅನುಭವವಿರುವ ಹರೀಶ್ ರಾಜ್ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದ ದ್ವೀಪ' ಹಾಗೂ ತಾಯಿ ಸಾಹೇಬ' ಚಿತ್ರಗಳಲ್ಲಿ ನಟಿಸಿ ಹೆಸರಾದವರು. ತಮ್ಮ ಪ್ರತಿಭೆಯನ್ನು ನಟನೆಗಷ್ಟೇ ಮೀಸಲಿಡದ ಹರೀಶ್ ಈ ಚಿತ್ರವನ್ನು ನಿರ್ದೇಶಿಸಲು ಮುಂದಾದರು ಹಾಗೂ ಕಥೆ, ಚಿತ್ರಕಥೆಯನ್ನು ಬರೆದರು. ಈ ಚಿತ್ರದಲ್ಲಿ ಸ್ತ್ರೀ ಪಾತ್ರದ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿರುವ ಅವರು ನಾಯಕಿಯರನ್ನು ನಾಚಿಸುವ ಹಾಗೆ ಕಾಣುತ್ತಾರೆ.
ಮುಂಗಾರು ಮಳೆ' ಯ ಹುಡುಗಿ ಪೂಜಾ ಗಾಂಧಿಯ ಸಹೋದರಿ ರಾಧಿಕಾ ಗಾಂಧಿ ಕಲಾಕಾರ್ನ ನಾಯಕಿ. ಹಿಂದೆ ಚಿಕ್ಕ ಮಗಳೂರ ಚಿಕ್ಕ ಮಲ್ಲಿಗೆ' ಚಿತ್ರದಲ್ಲಿ ಅಭಿನಯಿಸಿದ ಈಕೆಗೆ ಇದು ದ್ವಿತೀಯ ಚಿತ್ರ. ಬೆಡಗಿ ಸುಮನ್ ರಂಗನಾಥ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಸುಧಾ ನರಸಿಂಹರಾಜು, ಅವಿನಾಶ್(ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ), ರಾಜರಾವ್, ವಿಶ್ವ ಮುಂತಾದವರು ಅಭಿನಯಿಸಿದ್ದಾರೆ. ಕರ್ನಾಟಕಕದ ಸುಂದರ ಪ್ರದೇಶಗಳಲ್ಲಿ ಕಲಾಕಾರನಿಗೆ ಚಿತ್ರೀಕರಣ ನಡೆದಿದೆ. ಗಿರಿಧರ್ ದಿವಾನ್ ಸಂಗೀತ ಸಂಯೊಜಿಸಿರುವ ಚಿತ್ರದ ಹಾಡುಗಳಿಗೆ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ದೊರೆಕ್ಕಿದೆ. ಎಚ್.ಎಂ.ರಾಮಚಂದ್ರ ಛಾಯಾಗ್ರಹಣ, ಶ್ರೀ(ಕ್ರೇಜಿ ಮೈಂಡ್ಸ್) ಸಂಕಲನ ಈ ಚಿತ್ರಕ್ಕಿದೆ.