Don't Miss!
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Automobiles Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತಿಭಾವಂತ ಹರೀಶ್ ರಾಜ್ 'ಕಲಾಕರ್ 'ತೆರೆಗೆ
ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿ ಅನುಭವವಿರುವ ಹರೀಶ್ ರಾಜ್ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದ ದ್ವೀಪ' ಹಾಗೂ ತಾಯಿ ಸಾಹೇಬ' ಚಿತ್ರಗಳಲ್ಲಿ ನಟಿಸಿ ಹೆಸರಾದವರು. ತಮ್ಮ ಪ್ರತಿಭೆಯನ್ನು ನಟನೆಗಷ್ಟೇ ಮೀಸಲಿಡದ ಹರೀಶ್ ಈ ಚಿತ್ರವನ್ನು ನಿರ್ದೇಶಿಸಲು ಮುಂದಾದರು ಹಾಗೂ ಕಥೆ, ಚಿತ್ರಕಥೆಯನ್ನು ಬರೆದರು. ಈ ಚಿತ್ರದಲ್ಲಿ ಸ್ತ್ರೀ ಪಾತ್ರದ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿರುವ ಅವರು ನಾಯಕಿಯರನ್ನು ನಾಚಿಸುವ ಹಾಗೆ ಕಾಣುತ್ತಾರೆ.
ಮುಂಗಾರು ಮಳೆ' ಯ ಹುಡುಗಿ ಪೂಜಾ ಗಾಂಧಿಯ ಸಹೋದರಿ ರಾಧಿಕಾ ಗಾಂಧಿ ಕಲಾಕಾರ್ನ ನಾಯಕಿ. ಹಿಂದೆ ಚಿಕ್ಕ ಮಗಳೂರ ಚಿಕ್ಕ ಮಲ್ಲಿಗೆ' ಚಿತ್ರದಲ್ಲಿ ಅಭಿನಯಿಸಿದ ಈಕೆಗೆ ಇದು ದ್ವಿತೀಯ ಚಿತ್ರ. ಬೆಡಗಿ ಸುಮನ್ ರಂಗನಾಥ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಸುಧಾ ನರಸಿಂಹರಾಜು, ಅವಿನಾಶ್(ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ), ರಾಜರಾವ್, ವಿಶ್ವ ಮುಂತಾದವರು ಅಭಿನಯಿಸಿದ್ದಾರೆ. ಕರ್ನಾಟಕಕದ ಸುಂದರ ಪ್ರದೇಶಗಳಲ್ಲಿ ಕಲಾಕಾರನಿಗೆ ಚಿತ್ರೀಕರಣ ನಡೆದಿದೆ. ಗಿರಿಧರ್ ದಿವಾನ್ ಸಂಗೀತ ಸಂಯೊಜಿಸಿರುವ ಚಿತ್ರದ ಹಾಡುಗಳಿಗೆ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ದೊರೆಕ್ಕಿದೆ. ಎಚ್.ಎಂ.ರಾಮಚಂದ್ರ ಛಾಯಾಗ್ರಹಣ, ಶ್ರೀ(ಕ್ರೇಜಿ ಮೈಂಡ್ಸ್) ಸಂಕಲನ ಈ ಚಿತ್ರಕ್ಕಿದೆ.