ಅಂಬರೀಷ್, ಮುನಿರತ್ನ ಬರಲಿಲ್ಲ; ತೀರ್ಪು ಮುಂದೂಡಿಕೆ

ಇಂದಿನ ಸಭೆಯಲ್ಲಿ ಸಮಸ್ಯೆಗೆ ಬಹುತೇಕ, ಶೇ 90 ರಷ್ಟು ಪರಿಹಾರ ಕಂಡುಕೊಳ್ಳಲಾಗಿದ್ದು ಅಂತಿಮ ತೀರ್ಮಾನ ಘೋಷಣೆಗೂ ಮೊದಲು ಅಂಬರೀಷ್ ಜೊತೆ ಚರ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ನಡೆದ ಸಭೆಯಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ. ವಿ, ಚಂದ್ರಶೇಖರ್, ನಟ ಉಪೇಂದ್ರ ಹಾಗೂ ಗಾಡ್ ಫಾದರ್ ನಿರ್ಮಾಪಕ ಕೆ ಮಂಜು ಹಾಜರಿದ್ದರು. ನಾಡಿದ್ದು ಬರುವ ಅಂತಮ ತೀರ್ಮಾನಕ್ಕೆ ತಾವು ಬದ್ಧರಾಗಿರುವುದಾಗಿ ಹಾಜರಿದ್ದ ಕೆ ಮಂಜು ಘೋಷಿಸಿದ್ದಾರೆ.
ಸದ್ಯ ಯಾವುದೇ ತೀರ್ಮಾನ ಹೊರಬೀಳದ ಕಾರಣ ಉಪೇಂದ್ರರ ಯಾವ ಚಿತ್ರ ಮೊದಲು ಪ್ರೇಕ್ಷಕರೆದುರು ಬರಬಹುದೆಂಬ ಕುತೂಹಲ ಹಾಗೇ ಉಳಿದಿದೆ. ಜೊತೆಗೆ ವಾಣಿಜ್ಯ ಮಂಡಳಿ ಯಾರ ಪರವಾಗಿ ತೀರ್ಪು ನೀಡಿರಬಹುದೆಂಬ ಜಿಜ್ಞಾಸೆಯೂ ಇನ್ನೆರಡು ದಿನ ಜಾರಿಯಲ್ಲಿರುವಂತಾಗಿದೆ. 26ಕ್ಕೆ ಬರುವ ಅಂತಿಮ ತೀರ್ಪಿಗಾಗಿ ಎಲ್ಲರೂ ಕಾಯುತ್ತಿದ್ದಾರೆ. (ಒನ್ ಇಂಡಿಯಾ ಕನ್ನಡ)
More from Filmibeat
English summary
Movie Release Controversy took an uncompleted end. Ambarish and Munirathna are Absent for today's Meeting. So, decision postponed for day after tomorrow, on 26th April 2012.


Click it and Unblock the Notifications











