Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಆಕ್ಷನ್, ಕಟ್ ನಲ್ಲಿ ನೂತನ ಚಿತ್ರ
ಶಂಕರ್ ಪ್ರೊಡಕ್ಷನ್ಸ್ನ ಮೂರನೇ ಕಾಣಿಕೆ, ಆರ್.ಶಂಕರ್ ನಿರ್ಮಾಣದ ನೂತನ ಚಿತ್ರ ಫೆಬ್ರವರಿ 25ರಿಂದ ಆರಂಭವಾಗಲಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಸುದೀಪ್ ಅಭಿನಯ ಹಾಗೂ ನಿರ್ದೇಶನದ 'ಜಸ್ಟ್ಮಾತ್ಮಾತಲ್ಲಿ' ಚಿತ್ರ ಪ್ರೇಕ್ಷಕರ ಮನ ಗೆದ್ದಿದೆ.
ಇನ್ನೂ ಹೆಸರಿಡದ ಈ ಹೊಸ ಚಿತ್ರದಲ್ಲಿ ಸುದೀಪ್ ನಾಯಕರಾಗಿ ನಟಿಸುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಶ್ರೀವೆಂಕಟ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘುದೀಕ್ಷಿತ್ ಸಂಗೀತ ಸಂಯೋಜಿಸುತ್ತಿದ್ದಾರೆ. ಐದು ಹಾಡುಗಳನ್ನೊಳಗೊಂಡಿರುವ ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು ಹಾಗೂ ರಾಮನಗರದಲ್ಲಿ ನಡೆಯಲಿದೆ. ಕೆಂಪರಾಜ್ ಸಂಕಲನ, ಹರ್ಷ ನೃತ್ಯ ನಿರ್ದೇಶನವಿರುವ ಚಿತ್ರದ ಉಳಿದ ತಾರಾಬಳಗದಲ್ಲಿ ದೇವರಾಜ್, ಶೃತಿ, ಶ್ರೀಧರ್, ಲೋಹಿತಾಶ್ವ, ಅರುಣ್ಸಾಗರ್, ಯತಿರಾಜ್ ಮುಂತಾದವರಿದ್ದಾರೆ. ನಾಯಕಿಯ ಆಯ್ಕೆ ಪ್ರಗತಿಯಲ್ಲಿದೆ.
ಗೌತಮ್ಮೆನನ್ ನಿರ್ದೇಶನದಲ್ಲಿ ಸೂರ್ಯ ಹಾಗೂ ಜ್ಯೋತಿಕಾ ಅಭಿನಯಿಸಿದ ಭರ್ಜರಿ ಯಶಸ್ಸು ಕಂಡ 'ಕಾಕಾ ಕಾಕಾ ತಮಿಳು ಚಿತ್ರದ ಹಕ್ಕನ್ನು ಪಡೆದಿರುವ ಆರ್.ಶಂಕರ್ ಅವರು ಮಾರ್ಚ್ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.