Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನಲ್ಲಿ ಬುದ್ಧಿಜೀವಿಗಳ ಪ್ರತಿಭಟನೆ
ಚೆನ್ನೈ: ಅತ್ತ ಲಗಾನ್ ಚಿತ್ರ ತಂಡ ಆಸ್ಕರ್ ಪ್ರಶಸ್ತಿಯನ್ನು ಎದುರುನೋಡುತ್ತಿದ್ದರೆ, ಇತ್ತ ನಗರದಲ್ಲಿ ಲಗಾನ್ ದಲಿತ ವಿರೋಧಿ ಚಿತ್ರ ಎಂಬ ಹೋರಾಟ ಅಭಿಯಾನ ಆರಂಭವಾಗಿದೆ.
ದಲಿತ ವಿರೋಧೀ ಚಿತ್ರವೆಂಬ ಆಪಾದನೆಯಾಂದಿಗೆ ಹೋರಾಟಕ್ಕೆ ಇಳಿದಿರುವ ದಲಿತಪರ ಬುದ್ಧಿಜೀವಿಗಳ ಪ್ರಕಾರ ಚಿತ್ರದಲ್ಲಿ ಬರುವ ಕಚ್ಚಾ ್ರ ಪಾತ್ರವನ್ನು ತೀರಾ ಕೆಟ್ಟದಾಗಿ ಚಿತ್ರಿಸಲಾಗಿದೆ. ಚಿತ್ರದಲ್ಲಿ ಆತನ ಪ್ರತಿಭೆಯನ್ನು ಎತ್ತಿ ಹಿಡಿಯುವ ಬದಲಾಗಿ, ಅಂಗವಿಕಲತೆಯನ್ನೇ ಉತ್ಪ್ರೇಕ್ಷೆ ಮಾಡಲಾಗಿದೆ.
ಲಗಾನ್ ಚಿತ್ರದಲ್ಲಿ ದಲಿತರನ್ನು ನಿಕೃಷ್ಟವಾಗಿ ಕಾಣಲಾಗಿದ್ದು, ಪ್ರೇಕ್ಷಕರಲ್ಲಿ ದಲಿತರ ಬಗ್ಗೆ ತಪ್ಪು ಕಲ್ಪನೆ ಮೂಡುವಂತೆ ಪಾತ್ರಗಳನ್ನು ಚಿತ್ರೀಕರಿಸಲಾಗಿದೆ. ಇಂತಹ ಚಿತ್ರವೊಂದನ್ನು ಆಸ್ಕರ್ ಶಿಫಾರಸು ಮಾಡಿರುವುದು ದಲಿತರಿಗೆ ನೋವುಂಟು ಮಾಡುವ ವಿಷಯವಾಗಿದೆ. ಆದ್ದರಿಂದ ಲಗಾನ್ ಚಿತ್ರವನ್ನು ಸ್ಪರ್ಧೆಯಿಂದ ಹಿಂತೆಗೆದುಕೊಳ್ಳಬೇಕು ಎಂದು ಚೆನ್ನೈನ 'ದಲಿತ ಮುರಸು" ಪತ್ರಿಕೆಯ ಸಂಪಾದಕ ಪುನೀತ ಪಾಂಡ್ಯನ್ ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿಭಟನಾ ಅಭಿಯಾನದಲ್ಲಿ ದಲಿತ ಕಾರ್ಯಕರ್ತರೂ ಭಾಗವಹಿಸಿದ್ದಾರೆ. ಯಾವುದೇ ಚಿತ್ರ ದಲಿತರನ್ನು ಕೆಟ್ಟದಾಗಿ ಚಿತ್ರಿಸುವುದು ಸಲ್ಲ ಮತ್ತು ಅದನ್ನು ನಾವು ವಿರೋಧಿಸುತ್ತೇವೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾದ ಆರ್. ತಿರುಮವಲನ್ ಹೇಳಿದ್ದಾರೆ.
(ಇನ್ಫೋ ವಾರ್ತೆ)