Don't Miss!
- News ಚಾಮರಾಜನಗರ: 12 ವರ್ಷಗೊಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಲ್ಲರನ್ನೂ ಬಯ್ಯೋದೇ ವಿಶೇಷ.!-ಬೈಗಳು ಹೇಗಿರುತ್ತವೆ ಗೊತ್ತಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Finance ಸಾಂಬಾರು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ, ಇಂದು 276ಕ್ಕೂ ಹೆಚ್ಚು ಚಿನ್ನಾಭರಣ ಮಳಿಗೆಗಳ ಒಡೆಯ!
- Lifestyle ಹಸುವಿನ ಹಾಲಿನಿಂದ ಇಡೀ ವಿಶ್ವಕ್ಕೆ ಇನ್ಸುಲಿನ್..! ಹೊಸ ಅಧ್ಯಯನದಲ್ಲಿ ಬಹಿರಂಗ.!
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ನಗರದಲ್ಲಿ ಕೇಬಲ್ ಆಪರೇಟರ್ಗಳ ಅನಿರ್ದಿಷ್ಟಾವಧಿ ಮುಷ್ಕರ
ಬೆಂಗಳೂರು : ಲಾರಿ ಮುಷ್ಕರ ನಿಂತಿತು ಎಂದು ಸಮಾಧಾನದ ನಿಟ್ಟುಸಿರು ಪಡುತ್ತಿರುವಂತೆಯೇ, ಇದೋ ಎರಗಿದೆ ಇನ್ನೊಂದು ಮುಷ್ಕರದ ಪ್ರಹಾರ !
ಕೇಬಲ್ ಪ್ರಸಾರದ ಮೇಲೆ ರಾಜ್ಯಸರ್ಕಾರ ಏಕಾಏಕಿ ಶೇ.150ರಷ್ಟು ಮನರಂಜನಾ ತೆರಿಗೆ ಹೆಚ್ಚಿಸಿರುವುದನ್ನು ಪ್ರತಿಭಟಿಸಿ ಕೇಬಲ್ ಆಪರೇಟರ್ಗಳು ಏಪ್ರಿಲ್ 24ರ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದಾರೆ. ಬೆಂಗಳೂರು ನಗರದಲ್ಲಿ ಕೇಬಲ್ ಪ್ರಸಾರ ನಿಂತಿದೆ.
ಮನರಂಜನಾ ತೆರಿಗೆಯನ್ನು 3 ಸಾವಿರ ರುಪಾಯಿಯಿಂದ 7.5 ಸಾವಿರ ರುಪಾಯಿಗೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮ ಕೇಬಲ್ ಆಪರೇಟರ್ಗಳಿಗೆ ಹಾಗೂ ಗ್ರಾಹಕರಿಗೆ ಹೊರೆಯೆನಿಸಲಿದೆ. ಈ ಹೇರಿಕೆಯನ್ನು ಪ್ರತಿಭಟಿಸಿ ನಗರದ ಕೇಬಲ್ ಆಪರೇಟರ್ಗಳ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರದಿಂದ ಪ್ರಾರಂಭವಾಗಲಿದೆ. ಇದರಿಂದ ಬೆಂಗಳೂರು ನಾಗರಿಕರು ಕೇಬಲ್ ಟೀವಿ ಪ್ರಸಾರದಿಂದ ವಂಚಿತರಾಗಿದ್ದಾರೆ.
ತೆರಿಗೆ ಹೇರಿಕೆಯ ಬದಲು ಪ್ರತಿ ಗ್ರಾಹಕರಿಗೆ ಇಂತಿಷ್ಟು ದರವನ್ನು ಸರ್ಕಾರ ನಿಗದಿಪಡಿಸಬೇಕು ಎಂದು ಕೇಬಲ್ ಆಪರೇಟರ್ಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು ನಗರದಲ್ಲಿ 11 ಲಕ್ಷ ಕೇಬಲ್ ಸಂಪರ್ಕಗಳಿದ್ದು - 1800 ಆಪರೇಟರ್ಗಳು ಈ ಸಂಪರ್ಕಗಳನ್ನು ನಿಭಾಯಿಸತ್ತಿದ್ದಾರೆ. ಈ ಕೇಬಲ್ ಆಪರೇಟಿಂಗ್ ಕೇಂದ್ರಗಳಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು , ಮುಷ್ಕರದಿಂದಾಗಿ ಈ ಕಾರ್ಮಿಕರ ಜೀವನದ ಮೇಲೆ ಪೆಟ್ಟು ಬೀಳಲಿದೆ.
(ಇನ್ಫೋ ವಾರ್ತೆ)
ಪೂರಕ
ಓದಿಗೆ-
ಮುಖಪುಟ
/
ಸ್ಯಾಂಡಲ್ವುಡ್