ಟಾಪ್-5: ಇದು ಒಂದು ಮುತ್ತಿನ ಕಥೆ!
ರಾಜ್ಕುಮಾರ್ ಎಲ್ಲಿಂದಲೋ ಬಂದವರಲ್ಲ.. ನಮ್ಮಂತೆಯೇ ನಮ್ಮ ಮಧ್ಯೆಯೇ ಇದ್ದವರು. ಎತ್ತರೆತ್ತರ ಬೆಳೆದವರು. ಅವರು ಬೆಳೆಯುವುದರ ಹಿಂದೆ ಶ್ರಮದ ಬೆವರಿತ್ತು. ರಾಜ್ರ 79ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪದೇ ಪದೇ ಕೇಳಲ್ಪಡುವ ಕೆಲವು ಪ್ರಶ್ನೆಗಳು ಮತ್ತು ಉತ್ತರಗಳು...
- ಕನ್ನಡ ಬಿಟ್ಟು ಬೇರೆ ಭಾಷೆಗೆ ಹೋಗಲಿಲ್ಲ.
- ಜಾತಿಯಿಂದ ಗುರ್ತಿಸಿಕೊಳ್ಳಲಿಲ್ಲ.
- ರಾಜಕೀಯಕ್ಕೆ ಹೋಗಲಿಲ್ಲ.
- ಕೀರ್ತಿ ಕಿರೀಟ ತಲೆ ಮೇಲೆ ಕುಂತರೂ, ವಿನಯವಂತಿಕೆ ಬಿಡಲಿಲ್ಲ.
- ಹತ್ತಿದ ಏಣಿ ಒದೆಯದೇ, ಅಭಿಮಾನಿಗಳ ದೇವರೆಂದು ಗುರ್ತಿಸುವ ಬುದ್ದಿ.
- ಗಾಯಕ ಮತ್ತು ನಾಯಕನಾಗಿ ಯಶಸ್ಸು.
- ಸುಸ್ಪಷ್ಟ ಕನ್ನಡ.
- ಎಲ್ಲಾ ಪಾತ್ರಕ್ಕೂ ಸೈ..
- ಸ್ಯಾಂಡಲ್ವುಡ್ ಇತಿಹಾಸ ಶ್ರೀಮಂತಗೊಳಿಸಿದ್ದು.
- ನಟನಾಗಿ ಉಳಿಯದೇ ನಾಡು-ನುಡಿಗಾಗಿ ಕೈ ಎತ್ತಿದ್ದು.
- ಅಗತ್ಯಕ್ಕಿಂತ ಹೆಚ್ಚಿನ ಮುಗ್ಧತೆ.
- ನರಹಂತಕ ವೀರಪ್ಪನ್ ಅಂಗಳದಿ ನಿಂತು, ‘ನನ್ನನ್ನು ಇಲ್ಲಿಂದ ನಾಡಿಗೆ ಕರೆಸಿಕೊಳ್ಳಿ’ ಎಂದು ಸರ್ಕಾರಕ್ಕೆ ಧೈನ್ಯತೆಯಿಂದ ಕೈಜೋಡಿಸಿದ್ದು.
- ರಾಜ್ ಅಭಿಮಾನಿ ಸಂಘ, ರಜನಿ ಮತ್ತು ಚಿರಂಜೀವಿ ಅಭಿಮಾನಿ ಸಂಘದಂತೆ ಹೆಚ್ಚು ಸಮಾಜಮುಖಿಯಾಗಲಿಲ್ಲ. ಕೆಲವು ಸಲ ಅಭಿಮಾನಿ ಸಂಘದ ಪುಂಡಾಟಕ್ಕೆ ರಾಜ್ ಕಡಿವಾಣ ಹಾಕಲಿಲ್ಲ.
- ತಮ್ಮೊಳಗಿನ ಶಕ್ತಿಯನ್ನು ಬಳಸಿಕೊಂಡು, ಕರ್ನಾಟಕವನ್ನು ಸಮರ್ಥವಾಗಿ ಬಲಪಡಿಸಲಿಲ್ಲ.
- ಟೀಕೆ ಮಾಡುವುದಕ್ಕಾಗಿಯೇ ಕೆಲವು ಟೀಕೆಗಳು..
- ತಮ್ಮೆರಡು ಕಣ್ಣುಗಳ ಕೊಟ್ಟು, ಕೋಟ್ಯಂತರ ಅಭಿಮಾನಿಗಳಿಗೆ ಪ್ರೇರಣೆ ನೀಡಿದರು. ಸಾವಿರಾರು ದೃಷ್ಟಿಹೀನರಿಗೆ ಈ ಪರಿಣಾಮ, ಭರವಸೆಯ ಬೆಳಕು.
- ತಮ್ಮ ಚಿತ್ರಗಳ ಮೂಲಕ ಕೌಟುಂಬಿಕ ಸಾಮರಸ್ಯಕ್ಕೆ ಕೊಡುಗೆ.
- ಕೊನೆ ಉಸಿರಿಡುವ ತನಕ, ಅಭಿಮಾನಿಗಳಿಗೆ ಪ್ರೀತಿಯ ಸಿಂಚನ.
- ಇತಿಹಾಸ, ಪುರಾಣ, ಸಂತರ ಚಿತ್ರವನ್ನು ಮತ್ತು ನಾಡ ಸಂಸ್ಕೃತಿಯನ್ನು ತಮ್ಮ ಪಾತ್ರಗಳ ಮೂಲಕ, ರಾಜ್ ಎಲ್ಲರ ಎದೆಯಲ್ಲಿ ಬಿತ್ತಿದ್ದು..
- ತಮ್ಮ ಚಿತ್ರಗಳ ಮೂಲಕ ಶಿಕ್ಷಕನಂತೆ ನಿಂತು, ಸಭ್ಯ ಪ್ರಜೆಗಳ ಸೃಷ್ಟಿಸಿದ್ದು..
- ಪಾರ್ವತಮ್ಮ ರಾಜ್ ಕುಮಾರ್.
- ಕನ್ನಡತನಕ್ಕೆ ಅಂಟಿಕೊಂಡದ್ದು.
- ಅಭಿಮಾನಿಗಳ ಪ್ರೀತಿ.
- ಪ್ರತಿಭೆ ಮತ್ತು ಶ್ರಮದ ಸಮ್ಮಿಲನ.
- ಅದೃಷ್ಟ
ಮೇಲಿನ ವಿಚಾರಗಳಿಗೆ ನಿಮ್ಮ ಸಮ್ಮತಿ ಇದೆಯಾ? ಅಥವಾ ಏನಾದರೂ ತಕರಾರಿದ್ದರೇ ನಾಲ್ಕು ಸಾಲು ಬರೆಯಿರಿ..


Click it and Unblock the Notifications