Don't Miss!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿಯಲ್ಲಿ ಅಮಿತಾಬ್ ಬಚ್ಚನ್
- ದಟ್ಸ್ಕನ್ನಡ ಬ್ಯೂರೋ
ಕಳೆದ ಇಪ್ಪತ್ತೆೈದು ದಿನಗಳಿಂದ ಕಾವೇರಿ ತವರಾದ ಮಡಿಕೇರಿಯಲ್ಲೇ ಅಮಿತಾಬ್ ಕ್ಯಾಂಪು. ‘ಕ್ಯೋಂ ಹೋಗಯಾನ’ ಎಂಬ ಹಿಂದಿ ಚಿತ್ರದ ಶೂಟಿಂಗ್ ಮಡಿಕೇರಿಯಲ್ಲಿ ನಡೆಯುತ್ತಿದೆ. ಐಶ್ವರ್ಯ ರೈ ಹಾಗೂ ಸುನಿಲ್ ಶೆಟ್ಟಿ ಚಿತ್ರದ ಇತರೆ ಪಾತ್ರಧಾರಿಗಳು. ಈ ಇಬ್ಬರೂ ಮಾತಿಗೆ ಸಿಗಲಿಲ್ಲ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ಮಡಿಕೇರಿಯ ಸುಂದರ ಪರಿಸರದಲ್ಲಿ ಅಡ್ಡಾಡುತ್ತಿದ್ದ ಅಮಿತಾಬ್ ಮುಕ್ತವಾಗಿ ಮಾತಿಗೆ ಒಪ್ಪಿದ್ದು ಅಚ್ಚರಿ.
ಇವತ್ತು ಭಾರತೀಯ ಸಿನಿಮಾ ಏನು ಸಾಧಿಸಬೇಕು ಎಂಬ ಗಂಭೀರವಾದ ಪ್ರಶ್ನೆಗೆ ಮೊದಲು ನಕ್ಕ ಅಮಿತಾಬ್, ಆಮೇಲೆ ಭಾರತ- ಪಾಕಿಸ್ತಾನದ ಸಂಬಂಧ ಕುದುರಿಸುವ ಮಾತಾಡಿದರು. ಪಾಕಿಸ್ತಾನದ ಚಿತ್ರ ನಮ್ಮ ದೇಶಕ್ಕೆ ಬರಬೇಕು. ನಮ್ಮ ಚಿತ್ರಗಳು ಅಲ್ಲಿಗೆ ಹೋಗಬೇಕು. ಹೀಗಾದಾಗ ನಮ್ಮ ಮನಸ್ಥಿತಿಗಳು ಪರಸ್ಪರ ವಿನಿಮಯವಾಗುತ್ತವೆ. ಆಗ ಉಭಯ ದೇಶಗಳ ಸಂಬಂಧ ಸುಧಾರಣೆ ಖಂಡಿತ ಸಲೀಸಾಗುತ್ತದೆ. ಸಿನಿಮಾದಂಥ ಪ್ರಬಲ ಮಾಧ್ಯಮವನ್ನು ನಾವು ಶಾಂತಿದೂತನನ್ನಾಗಿ ಬಳಸಿಕೊಳ್ಳುವುದು ಖಂಡಿತ ಸಾಧ್ಯ ಎಂದರು.
ಕೊಡಗಿನ ತಂಪು ಹವೆಯನ್ನು ಮನಸಾರೆ ಮೆಚ್ಚಿಕೊಂಡಿರುವ ಬಚ್ಚನ್ ಮುಂದಿನ ಸಲ ಸಂಸಾರ ಸಮೇತರಾಗಿ ಇಲ್ಲಿ ರಜೆ ಕಳೆಯಲು ನಿರ್ಧರಿಸಿದ್ದಾರೆ. ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಕಾಳಜಿ ಮೂಡಿಸುವ ಸಲುವಾಗಿ ಯೂನಿಸೆಫ್ ರಾಯಭಾರಿಯಾಗಿರುವ ಬಚ್ಚನ್ಗೆ ದೇಶದಲ್ಲಿ ಪೋಲಿಯೋ ನಿರ್ಮೂಲನೆಯಾಗಬೇಕು ಹಾಗೂ ಎಲ್ಲಾ ಮಕ್ಕಳಿಗೂ ವಿದ್ಯೆ ದಕ್ಕಬೇಕು ಎಂಬ ಕನಸಿದೆ. ಅದನ್ನು ನನಸಾಗಿಸಲು ತಮ್ಮ ಕೈಲಾದ ಕೆಲಸವನ್ನು ಮಾಡಲು ಅವರು ಸಿದ್ಧವಿದ್ದಾರೆ.
ಮುಖಪುಟ / ಸ್ಯಾಂಡಲ್ವುಡ್