Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ಕಲಾವಿದೆ ರೇಣುಕಮ್ಮ ಮುರಗೊಡ ಇನ್ನಿಲ್ಲ
ಸವದತ್ತಿ, ಜೂ.25: ಹಿರಿಯ ಪೋಷಕ ನಟಿ, ರಂಗಭೂಮಿ ಕಲಾವಿದೆ ರೇಣುಕಮ್ಮ ಮುರಗೊಡ ಅವರು ಮುರಗೋಡಿನ ತಮ್ಮ ಸ್ವಗೃಹದಲ್ಲಿ ಬುಧವಾರ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಅನ್ನಾಹಾರ ತ್ಯಜಿಸಿದ್ದರು, ಮಾತು ಸಹ ನಿಂತು ಹೋಗಿತ್ತು.
ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾದ ಇವರು ಕಳೆದ ಕೆಲತಿಂಗಳಿನಿಂದ ಅಸ್ವಸ್ಥರಾಗಿ, ಬೈಲಹೊಂಗಲ ಸಮೀಪದ ಮುರಗೋಡಿನ ಮನೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು ಹಿರಿ ಜೀವ. ಆಸ್ಪತ್ರೆಯ ವೈದ್ಯಕೀಯ ವೆಚ್ಚಭರಿಸಲಾಗದೆ ಮನೆಯಲ್ಲೇ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿತ್ತು.
ರಾಜ್ಯ ಪ್ರಶಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿಗಳನ್ನು ಪಡೆದಿರುವ ಹಿರಿಯ ಕಲಾವಿದೆ ರೇಣುಕಮ್ಮ ಅವರ ಚಿಕಿತ್ಸೆ ನೆರವಿಗೆ ಯಾರು ಬಂದಿರಲಿಲ್ಲ. ಸ್ಥಳೀಯ ಕಲಾಭಿಮಾನಿಗಳು ಸರ್ಕಾರ ಹಾಗೂ ಅಧಿಕಾರಿ ವರ್ಗದ ವಿರುದ್ಧ ಅವರ ಮನೆಯವರು ಕಿಡಿಕಾರಿದ್ದರು. ನಮ್ಮೂರ ಮಂದಾರ ಹೂವೆ ಚಿತ್ರದ ಮೂಲಕ ಚಿತ್ರರಂಗದಲ್ಲಿ ಹೆಸರು ಗಳಿಸಿದ ರೇಣುಕಮ್ಮ ಅವರು ಚಂದ್ರಮುಖಿ ಪ್ರಾಣಸಖಿ, ಕ್ರೌರ್ಯ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲೂ ಮೂಡಲಮನೆ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ.
(ದಟ್ಸ್ಕನ್ನಡ ಸಿನಿವಾರ್ತೆ)
ಮೂಡಲ
ಮನೆ
ಅಜ್ಜಿಗೆ
ನೆರವು
ನೀಡಲು
ಸಂಪರ್ಕಿಸಿ
ಕೋಮಾಸ್ಥಿತಿ
ತಲುಪಿದ
ಮೂಡಲ
ಮನೆ
ಅಜ್ಜಿ