Don't Miss!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಪತಿಗೆ ಕಾಲ್ನಡಿಗೆಯಲ್ಲಿ ಪಾಟೀಲ್ ಯಾತ್ರೆ!
ಕನ್ನಡ ಚಿತ್ರರಂಗದ ನಿರ್ಮಾಪಕ ಬಸಂತಕುಮಾರ್ ಪಾಟೀಲ್ ಹೊಸ ಸಾಹಕ್ಕೆ ಕೈಹಾಕಿದ್ದಾರೆ. ಗಿರೀಶ್ ಕಾಸರವಳ್ಳಿ ಅವರೊಂದಿಗೆ 'ಕನಸೆಂಬ ಕುದುರೆಯನೇರಿ' ಚಿತ್ರ ನಿರ್ಮಿಸುತ್ತಿದ್ದಾರಲ್ಲಾ. ಈಗ ಮತ್ತೊಂದು ಚಿತ್ರ ನಿರ್ಮಿಸುತ್ತಾರಾ ಹೇಗೆ ಎಂದು ಕೇಳಬೇಡಿ! ಈಗವರು ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಹೋರಟಿದ್ದಾರೆ.
ಇದನ್ನು ಅವರು ಯಾವುದೇ ಚಿತ್ರದ ಯಶಸ್ವಿಗಾಗಿ ಮಾಡುತ್ತಿಲ್ಲ. ಅವರ ತಾಯಿ ತುಳಸಿಬಾಯಿ ಪಾಟೀಲರು ದೈವಾದೀನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ತಿಥಿಗಾಗಿ ಬಸಂತಕುಮಾರ್ ಪಾಟೀಲ್ ಅವರು ತಿರುಪತಿಗೆ ಕಾಲ್ನಡಿಗೆ ಯಾತ್ರೆ ಮಾಡುತ್ತಿದ್ದಾರೆ.
ದಿನವೊಂದಕ್ಕೆ 40 ಕಿ.ಮೀ ಸವೆಸಿ ಸೆಪ್ಟೆಂಬರ್ 25ಕ್ಕೆ ಅವರು ತಿರುಪತಿ ತಲುಪುತ್ತಾರೆ. ಅವರ ಕುಟುಂಬದ ಇತರೆ ಸದಸ್ಯರು ಶನಿವಾರ (ಸೆ.26)ತಿರುಪತಿ ತಿಮ್ಮಪ್ಪನ ಬೆಟ್ಟದಲ್ಲಿ ಪಾಟೀಲರನ್ನು ಬರಮಾಡಿಕೊಳ್ಳಲಿದ್ದಾರೆ. ಅಬ್ಬಾಯಿ ನಾಯ್ಡು ಅವರು ಪ್ರತಿ ವರ್ಷ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರಂತೆ.ಇರಲಿ, ತಿರುಪತಿಯಿಂದ ಪಾಟೀಲರು ಕ್ಷೇಮವಾಗಿ ಹಿಂತಿರುಗಲಿ ಎಂದು ಹಾರೈಸೋಣ.
(ದಟ್ಸ್ ಕನ್ನಡ ಚಿತ್ರವಾರ್ತೆ)