Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹೆಸರಿನಲ್ಲಿ 25 ಕೋಟಿ ರೂ ವಂಚನೆಗೆ ಯತ್ನ: ಎಸಿಪಿ ಕಚೇರಿಗೆ ಹಾಜರಾದ ನಟ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. ವಂಚಿಸಲು ಯತ್ನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ದರ್ಶನ್ ಮೈಸೂರಿನ ಎಸಿಪಿ ಕಚೇರಿಗೆ ಹಾಜರಾಗಿದ್ದಾರೆ. ಸುಮಾರು ಅರ್ಧ ಗಂಟೆಯಿಂದ ದರ್ಶನ್ ಎಸಿಪಿ ಕಚೇರಿಯಲ್ಲಿದ್ದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ.
ಈ ಪ್ರಕರಣ ಸಂಬಂಧ ಈಗಾಗಲೇ ವೋರ್ವ ಮಹಿಳೆಯನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಮಹಿಳೆ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ದರ್ಶನ್ ಬಳಿ ಲೋನ್ ವಿಚಾರವಾಗಿ ಮಾತನಾಡಲು ತೆರಳಿದ್ದರು, ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಮಹಿಳೆ, ನಿಮ್ಮ ಸ್ನೇಹಿತರು ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ, ಇದರ ಬಗ್ಗೆ ಮಾಹಿತಿ ಪಡೆಯಲು ಬಂದಿರುವುದಾಗಿ ದರ್ಶನ್ ಬಳಿ ಹೇಳಿದ್ದರು.
ಮೈಸೂರಿನ ಕೆಲ ದರ್ಶನ್ ಸ್ನೇಹಿತರು 25 ಕೋಟಿ ರೂ. ಲೋನ್ಗೆ ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಮಾಹಿತಿ ನೀಡಿದ್ದರು. ಈ ಬಗ್ಗೆ ದರ್ಶನ್ ಪರಿಶೀಲನೆ ನಡೆಸಿದಾಗ ಲೋನ್ಗೆ ಯಾರು ಅರ್ಜಿ ಹಾಕಿಲ್ಲ ಎನ್ನುವ ವಿಚಾರ ಗೊತ್ತಾಗಿದೆ. ಬಳಿಕ ದರ್ಶನ್ ಸ್ನೇಹಿತರಿಂದ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಬಂದಿದ್ದ ಮಹಿಳೆಯನ್ನು ಬಂಧಿಸಲಾಗಿದೆ.
Recommended Video
ಮಹಿಳೆಯ ವಿಚಾರಣೆ ವೇಳೆ ನಿರ್ಮಾಪಕ ಉಮಾಪತಿ ಹೆಸರನ್ನು ಹೇಳಿರುವುದಾಗಿ ಬಹಿರಂಗವಾಗಿದೆ. ಉಮಾಪತಿ ಹೇಳಿದ ಕಾರಣ ದರ್ಶನ್ ಬಳಿ ಬಂದು ಹೇಗೆಲ್ಲ ಮಾಡಿರುವುದಾಗಿ ಮಹಿಳೆ ಪೊಲೀಸರ ಬಳಿ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ನಿಜಕ್ಕೂ ಉಮಾಪತಿ ಹೀಗೆ ಮಾಡಿದ್ರಾ? ಇದರ ಹಿಂದಿನ ನಿಜವಾದ ಉದ್ದೇಶವೇನು? ಎನ್ನುವುದನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಮಾಪತಿ ಮತ್ತು ದರ್ಶನ್ ಇಬ್ಬರು ಉತ್ತಮ ಸ್ನೇಹಿತರು. ರಾಬರ್ಟ್ ಸಿನಿಮಾ ಬಳಿಕ ಇಬ್ಬರ ಸ್ನೇಹ ಮತ್ತಷ್ಟು ಗಟ್ಟಿಯಾಗಿತ್ತು. ಇದೀಗ ವಂಚನೆ ಪ್ರಕರಣ ಎಲ್ಲರಲ್ಲೂ ಗೊಂದಲ ಮೂಡಿಸಿದೆ.