Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಲ್ಲಾಪೆಟ್ಟಿಗೆಯಲ್ಲಿ ಗರಿಗೆದರಿದ 'ಡೆಡ್ಲಿ' ಕಲೆಕ್ಷನ್
'ಡೆಡ್ಲಿ2' ಚಿತ್ರದ ಮೊದಲ ವಾರದ ಗಳಿಕೆ ನೋಡಿದರೆ ನಿರ್ಮಾಪಕ ಮಂಜುನಾಥ್ ಸದ್ಯಕ್ಕೆ ಸೇಫ್. ನಟ ಆದಿತ್ಯ ಸಿನಿಮಾ ವೃತ್ತಿ ಬದುಕಿನಲ್ಲಿ ಈ ರೀತಿಯ ಒಂದು ಓಪನಿಂಗ್ ಸಿಕ್ಕಿದ ಚಿತ್ರ ಇನ್ನೊಂದಿರಲಿಕ್ಕಿಲ್ಲ. ನಿಜವಾದ ಡೆಡ್ಲಿ ಸೋಮನ ಖದರ್ ಇಷ್ಟಿರಲಿಲ್ಲವೆನೋ ಆ ಪಾಟಿ ಆದಿತ್ಯನ ನಟನೆ, ಮಾಧ್ಯಮ ಮತ್ತು ಪತ್ರಿಕೆಯಲ್ಲಿ ಭಾರೀ ಪ್ರಶಂಸೆಗೆ ಒಳಗಾಗಿತ್ತು.
ನಿರ್ದೇಶಕರ ನಿರೀಕ್ಷೆಯಂತೆ ಚಿತ್ರ ಮಾಸ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಸಫಲವಾಗಿದೆ. ಸುಹಾಸಿನಿ ಮಣಿರತ್ನಂ, ದೇವರಾಜ್, ರವಿಕಾಳೆ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಕನ್ನಡ ಚಿತ್ರಗಳ ಗಲ್ಲಾಪೆಟ್ಟಿಗೆ ಭವಿಷ್ಯ ಹೆಚ್ಚುಕಮ್ಮಿ ಮೊದಲ ವಾರದ ಗಳಿಕೆಯಿಂದ ಅಂದಾಜು ಮಾಡಬಹುದು. ಚಿತ್ರಕ್ಕೆ ಇದೇ ರೀತಿ ಪ್ರೇಕ್ಷಕರಿಂದ ಬೆಂಬಲ ದೊರೆತರೆ ಮೂರನೇ ವಾರದೊಳಗೆ ನನಗೆ ಈ ಚಿತ್ರ ಉತ್ತಮ ಲಾಭ ತಂದುಕೊಡುವುದರಲ್ಲಿ ಸಂಶಯವಿಲ್ಲ ಎನ್ನುವುದು ನಿರ್ಮಾಪಕ ಮಂಜುನಾಥ ಗೌಡರ ಅಂಬೋಣ.
ಚಿತ್ರದಲ್ಲಿನ ಆದಿತ್ಯನ ನಟನೆ ಮತ್ತು ಚಿತ್ರದ ಬಗ್ಗೆ ಆದಿತ್ಯನಿಗೆ ಎಸ್ಎಂಎಸ್ ಮತ್ತು ದೂರವಾಣಿ ಕರೆಗಳು ತಡೆಬಿಡದೇ ಬರುತ್ತಲೇ ಇದೆ. ನಿರ್ದೇಶಕರು ಚಿತ್ರದ ಮೊದಲ ಕಾಪಿ ತೋರಿಸಿದಾಗಲೇ ಈ ಚಿತ್ರ ಹಿಟ್ ಆಗುವುದರಲ್ಲಿ ಡೌಟೇಇಲ್ಲ ಎಂದು ರವಿ ಶ್ರೀವತ್ಸ ಅವರಿಗೆ ಹೇಳಿದ್ದೆ ಎಂದು ಆದಿತ್ಯರ ತಂದೆ ಮತ್ತು ಖ್ಯಾತ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.
ಪ್ರತಿಭಾವಂತ ನಟ ಆದಿತ್ಯನಿಗೆ ಒಂದು ಹಿಟ್ ಚಿತ್ರದ ತುರ್ತು ಅವಶ್ಯಕತೆಯಿದೆ. ನಟ ಆದಿತ್ಯನ ವೃತ್ತಿ ಬದುಕಿಗೆ ಈ ಚಿತ್ರದ ಮೂಲಕ ಒಂದು ಒಳ್ಳೆ ಬ್ರೇಕ್ ಸಿಗುವಂತಾಗಲಿ ಮತ್ತು ನಿರ್ಮಾಪಕರ ಲೆಕ್ಕಾಚಾರ ತಲೆಕೆಳಗಾಗದಿರಲಿ ಎನ್ನುವುದು ಸಿನಿರಸಿಕರ ಆಶಯ.