Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾನವೀಯತೆ ಮೆರೆದ ಕಲಾಸಾಮ್ರಾಟ್ ನಾರಾಯಣ್
ಕನ್ನಡ ಚಿತ್ರರಂಗದ ನಟ, ನಿರ್ದೇಶಕ, ನಿರ್ಮಾಪಕ ಎಸ್.ನಾರಾಯಣ್ ಅಂಧ ಮಕ್ಕಳ ಬಗ್ಗೆ ಕಾಳಜಿ ತೋರಿಸಿದ್ದಾರೆ. ತಮ್ಮ ಪುತ್ರ ಪಂಕಜ್ ಅಭಿನಯದ 'ರಣ' ಚಿತ್ರದ ಹಾಡುಗಳನ್ನು ಜೆ.ಪಿ.ನಗರದಲ್ಲಿರುವ ರಮಣ ಮಹರ್ಷಿ ಅಂಧ ಮಕ್ಕಳ ಶಾಲೆಯಲ್ಲಿ ಬಿಡುಗಡೆ ಮಾಡಿದ ಅವರು ಅಂಧ ಮಕ್ಕಳು ಒಳಗಣ್ಣಿನಿಂದ ದೇವರನ್ನು ನೋಡುತ್ತಾರೆ.
ನಮ್ಮ ಅನುಕಂಪಕ್ಕಿಂತ ಹೆಚ್ಚಾಗಿ ಪ್ರೋತ್ಸಾಹದ ಅವಶ್ಯಕತೆ ಈ ಮಕ್ಕಳಿಗೆ ಬೇಕಾಗಿದೆ. ಸಿನಿಮಾದಲ್ಲಿ ಕೆಲವೊಂದು ದೃಶ್ಯಗಳಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತೇವೆ. ಒಂದು ದಿನ ಶೂಟಿಂಗ್ ನಿಂತರೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ನಾನು ಒಂದು ದಿನದ ಚಿತ್ರೀಕರಣ ವೆಚ್ಚವನ್ನು ಶಾಲೆಗಾಗಿ ನೀಡುತ್ತೇನೆ ಎಂದರು.
ಪಂಕಜ್ ಹುಟ್ಟುಹಬ್ಬವನ್ನು ಮುಂದೆ ನಾವು ಅಂಧ ಮಕ್ಕಳ ಶಾಲೆಯಲ್ಲಿಯೇ ಆಚರಿಸುತ್ತೇವೆ. ಶಾಲೆಗಾಗಿ ನಮ್ಮ ಕೈಲಾದ ಸಹಾಯ ಮಾಡುತ್ತೇವೆ. ಪಂಚತಾರಾ ಹೋಟೆಲ್ಗಳಲ್ಲಿ ಆಡಿಯೊ ಬಿಡುಗಡೆ ಮಾಡುವುದಕ್ಕಿಂತ ಇದೊಂದು ಅರ್ಥಪೂರ್ಣ ಸಮಾರಂಭ ಎಂದರು. ಇಂತಹ ಮಾನವೀಯತೆಯ ಗುಣ ಉಳಿದ ಕಲಾವಿದರಿಗೂ ಬರಲಿ ಮತ್ತು ಅಂಧ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ಸಿಗುವಂತಾಗಲಿ. (ಒನ್ಇಂಡಿಯಾ ಕನ್ನಡ)