Don't Miss!
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಭೀಮಾ ತೀರದಲ್ಲಿ ಬಿಡುಗಡೆಗೆ ರೆಡಿ
ಬಹಳಷ್ಟು ಕುತೂಹಲ ಕೆರಳಿಸಿರುವ ದುನಿಯಾ ವಿಜಯ್ ಅಭಿನಯದ 'ಭೀಮಾ ತೀರದಲ್ಲಿ' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವನ್ನು ಮಾರ್ಚ್ 16ಕ್ಕೆ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರದ ನಿರ್ಮಾಪಕ ಅಣಜಿ ನಾಗರಾಜ್ ತಿಳಿಸಿದ್ದಾರೆ. ಓಂ ಪ್ರಕಾಶ್ ರಾವ್ ಅವರ ಮತ್ತೊಂದು ಮಾಸ್ ಎಂಟರ್ಟೈನ್ಮೆಂಟ್ ಚಿತ್ರ ಇದಾಗಿದೆ.
ಈ ಚಿತ್ರದ ವಿಶಾಲ ಕರ್ನಾಟಕದ ವಿತರಣೆ ಹಕ್ಕುಗಳನ್ನು ಸಮರ್ಥ ಪ್ರಸಾದ್ ಅವರು ಪಡೆದಿದ್ದಾರೆ. ಕಂಠೀರವ ಸ್ಟುಡಿಯೋದ ಅಧ್ಯಕ್ಷರಾದ ರುದ್ರೇಶ್ ಅವರು ಅರ್ಪಿಸುತ್ತಿರುವ ಚಿತ್ರದ ನಾಯಕಿ ಪ್ರಣೀತಾ. ಈಗಾಗಲೆ ದುನಿಯಾ ವಿಜಯ್ ಜೊತೆ 'ಜರಾಸಂಧ' ಚಿತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆ ಪಾತ್ರರಾಗಿರುವುದು ಗೊತ್ತೇ ಇದೆ.
ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ದುಸ್ವಪ್ನವಾಗಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ಚಂದಪ್ಪ ಹರಿಜನ ಜೀವನದ ಮೇಲೆ ಚಿತ್ರ ಬೆಳಕು ಬೀರಲಿದೆ. ಸಾಕಷ್ಟು ಕಸರತ್ತು ಮಾಡಿ ಚಿತ್ರಕತೆಯನ್ನು ಸಿದ್ಧಪಡಿಸಿದ್ದಾಗಿ ಓಂ ಪ್ರಕಾಶ್ ರಾವ್ ತಿಳಿಸಿದ್ದಾರೆ. ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಚಿತ್ರದಲ್ಲಿ ವಿಶೇಷ ಪಾತ್ರವನ್ನು ಪೋಷಿಸಿರುವುದು ಚಿತ್ರದ ಮತ್ತೊಂದು ವಿಶೇಷ. (ಏಜೆನ್ಸೀಸ್)