'ಮಳೆಯಲಿ ಜೊತೆಯಲಿ' ಚಿತ್ರಕ್ಕೆ ಗಣೇಶನ ರಾಗ
ಗೋಲ್ಡನ್ ಸ್ಟಾರ್ ಗಣೇಶ್ ಗಾಯಕರಾಗಿ ಬದಲಾಗಿದ್ದಾರೆ! ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ ಅವರು ಹಾಡೊಂದನ್ನು ಹಾಡಿದ್ದಾರೆ.ಮಳೆಯಲಿ ಜೊತೆಯಲಿ ಚಿತ್ರದ ನಾಯಕನನ್ನು ಪರಿಚಯಿಸುವ ಈ ಹಾಡಿಗೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.
ತಮ್ಮ ಹತ್ತು ವರ್ಷಗಳ ಸಿನಿ ವೃತ್ತಿ ಜೀವನದಲ್ಲಿ ಗಣೇಶ್ ನಟಿಸುತ್ತಿರುವ 25ನೇ ಚಿತ್ರ ಇದಾಗಿದೆ. ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿರುವ 12ನೇ ಚಿತ್ರ 'ಮಳೆಯಲಿ ಜೊತೆಯಲಿ'. ಈ ಹಿಂದೆ ಗಣೇಶ್ ನಟಿಸಿದ ಚಿತ್ರಗಳು ಬಾಕ್ಸಾಫೀಸಲ್ಲಿ ಆರೆಕ್ಕೇರಿಲ್ಲ ಮೂರಕ್ಕೆ ಇಳಿದಿಲ್ಲ. ಹಾಗಾಗಿ ಗಣೇಶ್ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಯಲ್ಲಿದ್ದಾರೆ.
ಗಣೇಶ್ ರ ಹೆಂಡತಿ ಶಿಲ್ಪಾ ಈ ಚಿತ್ರದ ನಿರ್ಮಾಪಕಿ. ಗಣೇಶ್ ರ ಹುಟ್ಟುಹಬ್ಬದ ದಿನ ಜುಲೈ 2ರಂದು 'ಮಳೆಯಲಿ ಜೊತೆಯಲಿ' ಚಿತ್ರ ಸೆಟ್ಟೇರಲಿದೆ. ಗಣೇಶ್ ತಂಡ ಮತ್ತೊಂದು ಮುಂಗಾರು ಮಳೆ ಕನಸಿನಲ್ಲಿದೆ. ಈ ದಿಶೆಯಲ್ಲಿ ನಿರ್ದೇಶಕ ಪ್ರೀತಂ ಗುಬ್ಬಿ, ಸಂಕಲನಕಾರ ದೀಪು ಮತ್ತು ಛಾಯಾಗ್ರಾಹಕ ಕೃಷ್ಣ ಅವರ ಪ್ರಯತ್ನ ಮುಂದುವರೆದಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)


Click it and Unblock the Notifications











